ದೆಹಲಿ ಮಾಜಿ ಸಿಎಂ ಆತಿಶಿ ಬಂಧಿಸಲಾಗಿದೆ ಎಂದ ಎಎಪಿ: ಪೊಲೀಸರ ನಕಾರ

Date:

Advertisements

ದೆಹಲಿಯ ಕಲ್ಕಾಜಿಯ ಭೂಮಿಹೀನ್ ಶಿಬಿರದ ನಿವಾಸಿಗಳನ್ನು ಭೇಟಿ ಮಾಡಲು ಹೋದಾಗ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ ನಾಯಕಿ ಆತಿಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಎಪಿ ಹೇಳಿಕೊಂಡಿದೆ. ಆದರೆ ಪೊಲೀಸರು ಮಾತ್ರ ಇದನ್ನು ನಿರಾಕರಿಸಿದ್ದಾರೆ.

ಜುಗ್ಗಿ-ಜೋಪ್ರಿ ಶಿಬಿರದಲ್ಲಿರುವ ಮನೆಗಳಿಗೆ ದೆಹಲಿ ಅಭಿವೃದ್ಧಿ ಪ್ರಾಧಿಕಾರವು ನೋಟಿಸ್ ಅಂಟಿಸಿದೆ. ಈ ಮನೆಯು ಅತಿಕ್ರಮಣವಾಗಿದ್ದು ಮೂರು ದಿನಗಳಲ್ಲಿ ಮನೆ ಖಾಲಿ ಮಾಡಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.

ಇದನ್ನು ಓದಿದ್ದೀರಾ? ‘ದೆಹಲಿ ಸಿಎಂ ಆತಿಶಿ ಬಂಧನಕ್ಕೆ ಸಿದ್ಧತೆ!’

Advertisements

ಜೂನ್ ಮತ್ತು ಜುಲೈ 2023ರಲ್ಲಿ, ಈ ವರ್ಷ ಮೇ ತಿಂಗಳಲ್ಲಿ ಮೂರು ಬಾರಿ ನೆಲಸಮ ಕಾರ್ಯಾಚರಣೆ ಮಾಡಲಾಗಿದೆ. ಇಲ್ಲಿ ನೆಲೆಸಿರುವವರು ಹೆಚ್ಚಿನವರು ವಲಸೆ ಕಾರ್ಮಿಕರು ಆಗಿದ್ದಾರೆ, ಅವರಿಗೆ ಶಿಬಿರ ಇದಾಗಿದೆ. ಇವರನ್ನು ಭೇಟಿ ಮಾಡಲು ಹೋದಾಗ ಆತಿಶಿ ಬಂಧನ ನಡೆದಿದೆ ಎನ್ನಲಾಗಿದೆ. ಆದರೆ ಪೊಲೀಸರು ಮಾತ್ರ ನಾವು ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಆತಿಶಿ, “ನಾಳೆ, ಬಿಜೆಪಿ ಭೂಮಿಹೀನರ ಶಿಬಿರದ ಮೇಲೆ ಬುಲ್ಡೋಜರ್‌ಗಳನ್ನು ಓಡಿಸಲಿದೆ. ಇಂದು, ಅಲ್ಲಿನ ಕೊಳೆಗೇರಿ ನಿವಾಸಿಗಳು ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದರು. ಆದ್ದರಿಂದ ಬಿಜೆಪಿ ಸರ್ಕಾರ ಸಾವಿರಾರು ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಿದೆ” ಆರೋಪಿಸಿದ್ದಾರೆ.

“ರೇಖಾ ಗುಪ್ತಾ ಅವರೇ ಯಾವುದೇ ಕೊಳೆಗೇರಿಗಳನ್ನು ಕೆಡವಲಾಗುವುದಿಲ್ಲ ಎಂದು ನೀವು ಹೇಳಿದ್ದೀರಿ ಅಲ್ಲವೇ? ಹಾಗಾದರೆ ಇಷ್ಟೊಂದು ಬೃಹತ್ ಪೊಲೀಸ್ ಮತ್ತು ಸಿಆರ್‌ಪಿಎಫ್‌ ಪಡೆ ಏಕೆ ನಿಯೋಜಿಸಲಾಗಿದೆ” ಆತಿಶಿ ದೆಹಲಿ ಸಿಎಂ ರೇಖಾ ಅವರನ್ನು ಪ್ರಶ್ನಿಸಿದ್ದಾರೆ.

ಆದರೆ ರೇಖಾ ಮಾತ್ರ ನ್ಯಾಯಾಲಯಗಳು ಹೊರಡಿಸಿದ ಆದೇಶವನ್ನು ಅಧಿಕಾರಿಗಳು ವಿರೋಧಿಸಲು ಸಾಧ್ಯವಿಲ್ಲ. ಸ್ಥಳಾಂತರಗೊಂಡ ನಿವಾಸಿಗಳಿಗೆ ವಸತಿ ಒದಗಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X