ಅಮಿತ್ ಶಾ ಮಗ, ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಬಿಜೆಪಿಗರು ಪ್ರತಿಭಟಿಸಲಿ, ಸರ್ಕಾರದ ವಿರುದ್ಧವಲ್ಲ: ಬಿ ಕೆ ಹರಿಪ್ರಸಾದ್‌

Date:

Advertisements

ಬಿಜೆಪಿಗರು ಮಾಡಬೇಕಾಗಿರುವ ಹೋರಾಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಗ ಬಿಸಿಸಿಐ ಮುಖ್ಯಸ್ಥರಾಗಿದ್ದ, ಐಸಿಸಿಯ ಅಧ್ಯಕ್ಷ ಜಯ್ ಶಾ ವಿರುದ್ಧವೇ ಹೊರತು ರಾಜ್ಯ ಸರ್ಕಾರದ ವಿರುದ್ಧವಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಬಿಜೆಪಿ ವಿರುದ್ಧ ಹಾರಿಹಾಯ್ದಿರುವ ಅವರು, ” ಐಪಿಎಲ್ ನಡೆಸಿ ಸಾವಿರಾರು ಕೋಟಿ ಲಾಭ ಪಡೆಯುವ ಬಿಸಿಸಿಐ ಮತ್ತು ಐಸಿಸಿ ಈಗ ಬಾಯ್ಮಿಚ್ಚಿಕೊಂಡಿರುವುದು ಯಾಕೆ” ಎಂದು ಪ್ರಶ್ನಿಸಿದ್ದಾರೆ.

“ಅಮಾಯಕ ಜನರನ್ನು ಪ್ರಚೋದಿಸುವುದು, ನಂತರ ಆಗುವ ಅನಾಹುತಗಳಿಂದ ಲಾಭ ಪಡೆಯುವ ಸಂಚು ರೂಪಿಸುವುದು ಬಿಜೆಪಿಯ ಚುನಾವಣಾ ರಾಜಕೀಯದ ಕಾರ್ಯಕ್ರಮ. ಅದರ ಭಾಗವೇ ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದ ಘಟನೆಗಳು ಸಾಕ್ಷಿ” ಎಂದಿದ್ದಾರೆ.

Advertisements

“ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಂಜಾಗ್ರತಾ ಕ್ರಮಗಳನ್ನೇ ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸಿ ಜನರನ್ನು ಸರ್ಕಾರದ ವಿರುದ್ಧ ಪ್ರಚೋದಿಸಿತ್ತು. ಆದರೆ ಈಗ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಘೋಷಣೆ ಮಾಡಿರುವುದು ಹಾಸ್ಯಾಸ್ಪದ. ಬಿಜೆಪಿಗರು ಇಂತಹ ಕೀಳು ಮಟ್ಟದ ರಾಜಕೀಯವನ್ನು ನಿಲ್ಲಿಸಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಲಾಭ ಮಾತ್ರ ಬೇಕು ಪರಿಹಾರ ಬೇಡವೇ? ಬಿಜೆಪಿ ಮತ್ತು ಎನ್ಡಿಯ ಫಲಾನುಭವಿ ಜೆಡಿಎಸ್ ಪಕ್ಷ ಕೂಡಲೇ ಗೃಹ ಸಚಿವ ಅಮಿತ್ ವಿರುದ್ಧ ಹೋರಾಟ ನಡೆಸಿ ಐಸಿಸಿ ಅಧ್ಯಕ್ಷ ಜಯ್ ಶಾ ಅವರ ಬಳಿ ಮೃತರ ಕುಟುಂಬಗಳಿಗೆ ತಲಾ 5 ಕೋಟಿ ರೂಪಾಯಿಗಳ ಪರಿಹಾರವನ್ನು ಕೊಡಿಸಲು ಒತ್ತಾಯಿಸಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X