ರಾಯಚೂರು | ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಪ್ರಕರಣ; ಜೆಡಿಎಸ್ ಶಾಸಕಿ ಪುತ್ರನಿಗೆ ಬಂಧನದ ವಾರೆಂಟ್

Date:

Advertisements

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಪುತ್ರ ಸಂತೋಷ ಗೋಪಾಲಕೃಷ್ಣ ನಾಯಕ, ವಿಚಾರಣೆಗೆ ಕೋರ್ಟ್ ಹಾಜರಾಗದ ಹಿನ್ನೆಲೆಯಲ್ಲಿ ಬಂಧನಕ್ಕೆ ಜಿಲ್ಲಾ ಸತ್ರ ನ್ಯಾಯಾಲಯ ಇತ್ತೀಚೆಗೆ ವಾರೆಂಟ್ ಜಾರಿ ಮಾಡಿದೆ.

ಕಳೆದ ವರ್ಷ ಕೃಷ್ಣಾ ನದಿಯಿಂದ ಅಕ್ರಮವಾಗಿ ಮರಳು ಸಾಗಣೆ ಮಾಡುವ ವೇಳೆ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಹನುಮಂತ ಎನ್ನುವವರು ಟ್ರ್ಯಾಕ್ಟರ್ ತಡೆದಿದ್ದರು. ಈ ಸಂಬಂಧ ಮಾತುಕತೆಗೆಂದು ಪ್ರವಾಸಿ ಮಂದಿರಕ್ಕೆ ಕರೆಸಿ ಶಾಸಕಿಯ ಪುತ್ರ ಸಂತೋಷ, ಶಾಸಕರ ಆಪ್ತ ಸಹಾಯಕರಾದ ರಫಿ, ಇಲಿಯಾಜ್ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಜಾತಿ ನಿಂದನೆ ಮಾಡಲಾಗಿದೆಯೆಂದು ದೂರು ನೀಡಿದ್ದರು.

ಪ್ರಕರಣ ಕುರಿತು ಬಹುತೇಕರು ಜಾಮೀನು ಪಡೆದಿದ್ದರು. ಜಿಲ್ಲಾ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ವಿಚಾರಣೆಗೆ ಸಂತೋಷ ಗೈರಾದ ಹಿನ್ನೆಲೆಯಲ್ಲಿ ಬಂಧನ ಮಾಡಿ ವಿಚಾರಣೆಗೆ ಹಾಜರುಪಡಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.

Advertisements

ಪ್ರಕರಣ ಸಂಬಂಧ ಸಂತೋಷನ ವಿರುದ್ಧ ಸೆಕ್ಷನ್ 143, 147, 323, 332, 353, 342, 504, 1490 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಮುಂದಿನ ವಿಚಾರಣೆ ನಡೆಯುವ ಜು.5ರಂದು ಆರೋಪಿಯನ್ನು ಹಾಜರುಪಡಿಸಲು ಸೂಚಿಸಿದೆ. ಕೋರ್ಟ್ ಬಂಧನ ಆದೇಶ ನೀಡಿದರೂ ಪೊಲೀಸರು ಸಂತೋಷನನ್ನು ಬಂಧಿಸಲು ಹಿಂದೇಟು ಹಾಕಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಈ ಸುದ್ದಿ ಓದಿದ್ದೀರಾ? ಬಂಟ್ವಾಳ | ಪಾಣೆಮಂಗಳೂರು ಹಳೆ ಸೇತುವೆ ಮೇಲೆ ಸಂಚಾರ ನಿಷೇಧ: ಆದೇಶ ಹೊರಡಿಸಿದ ತಹಶೀಲ್ದಾರ್

ಕೋರ್ಟ್‌ನಿಂದ ವಾರೆಂಟ್ ಜಾರಿಯಾದರೂ ಕ್ಯಾರೆ ಎನ್ನದ ಆರೋಪಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ‌ಯನ್ನು ಭೇಟಿಯಾಗಿ ಅವರೊಂದಿಗೆ ಫೋಟೋ‌ ಕೊಡುತ್ತ ಕಾಲ ಹರಣ ಮಾಡುತ್ತಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸಂತೋಷ, ಗೋಪಾಲಕೃಷ್ಣ ಸೇರಿ ಕೆಲವರ ವಿರುದ್ಧ ಕೇಸ್ ದಾಖಲಾಗಿತ್ತು. ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸಂತೋಷ ಬಂಧನ ವಾರೆಂಟ್ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಲಿಂಗಸೂಗೂರು ಡಿವೈಎಸ್‌ಪಿ ದತ್ತಾತ್ರೇಯ ಕರ್ನಾಡ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X