ಬಳ್ಳಾರಿ | ಕಾಲುವೆ ಸ್ವಚ್ಛಗೊಳಿಸುವಂತೆ ರೈತ ಸಂಘ ಆಗ್ರಹ

Date:

Advertisements

ಕಾಲುವೆಯಲ್ಲಿ ತುಂಬಿರುವ ಕಸ ಕಡ್ಡಿ ಸ್ವಚ್ಛಗೊಳಿಸಿಲ್ಲ. ಪರಿಣಾಮ, ರೈತರ ಜಮೀನುಗಳಿಗೆ ನೀರು ಹೋಗದೆ ತುಂಬಾ ತೊಂದರೆಯಾಗುತ್ತಿದೆ. ತುರ್ತಾಗಿ ಕಾಲುವೆ ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತ ಸಂಘ ಒತ್ತಾಯಿಸಿದೆ.

ರೈತ ಸಂಘದ ಕಾರ್ಯಕರ್ತರು ಬಳ್ಳಾರಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಎಂಜನಿಯರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. “ಚಾಗನೂರು, ಸಂಗನಕಲ್ಲು ಡಿಪಿ ನಂಬರ್ 27ರ ಕಾಲುವೆ ಬೇಲಿ ಮತ್ತು ಕಾಮಗಾರಿ ಪೂರ್ಣಗೊಳಿಸಬೇಕು. ಬಳಿಕ ಕಾಲುವೆಯಲ್ಲಿರುವ ಕಸಕಡ್ಡಿ ಸ್ವಚ್ಛಗೊಳಿಸಬೇಕು” ಎಂದು ಒತ್ತಾಯಿಸಿದರು.

“ಪ್ರತಿ ವರ್ಷವೂ ಕಾಲುವೆಯನ್ನು ಸ್ವಚ್ಛಗೊಳಿಸುತ್ತಿದ್ದರು. ಆದರೆ ಈ ಬಾರಿ ಸ್ವಚ್ಛಗೊಳಿಸದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಕಾಮಗಾರಿ ಕೆಲಸವನ್ನೂ ಪೂರ್ಣಗೊಳಿಸಿಲ್ಲ. ಶೀಘ್ರದಲ್ಲಿಯೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಕುವೆಂಪು ವಿವಿ ಘಟಿಕೋತ್ಸವ; ಮೂವರಿಗೆ ಗೌರವ ಡಾಕ್ಟರೇಟ್

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಾಲುವೆ ಪರಿಶೀಲಿಸಿ ಆದಷ್ಟು ಬೇಗನೆ ಸ್ವಚ್ಛಗೊಳಿಸಬೇಕು. ಒಂದು ವೇಳೆ ಇದರ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ ವಹಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರುಗಳಾದ ಕೃಷ್ಣಮೂರ್ತಿ, ಶೇಖರಪ್ಪ, ಹೇಮಂತ್ ರಾಜ್ ಗಾಳೆಪ್ಪ, ಯು ಸಂಗಪ್ಪ, ಹುಲಗಪ್ಪ, ಹನುಮನ ಗೌಡ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X