ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳು ಆಸಕ್ತಿ, ಜವಳಿ ಸಚಿವರೊಂದಿಗೆ ಚರ್ಚೆ

Date:

Advertisements

ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಇಂದು (ಜೂ.11) ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು.

ಪೆಂಟಗಾನ್ ನಿಟ್ ಕಾಂನ ಮಾಹಿತಿ ಪಡೆದ ಸಚಿವರು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಗೌರಿಬಿದನೂರು, ಚಿಕ್ಕಬಳ್ಳಾಪುರ, ಶಿಗ್ಗಾವಿಯಲ್ಲಿ ಯೂನಿಟ್ ಆರಂಭಿಸಬಹುದು ಎಂದು ಸಲಹೆ ನೀಡಿದರು.

ಈ ಮೂರೂ ಕಡೆ ಅಗತ್ಯ ಮೂಲ ಸೌಕರ್ಯಗಳಿವೆ. ಶಿಗ್ಗಾವಿಗೆ ವಿಮಾನ ಸಂಪರ್ಕ ಮತ್ತು ರೈಲ್ವೆ ಸಂಪರ್ಕ ಇದೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ಯೂನಿಟ್ ಆರಂಭಿಸಬಹುದು. ಇನ್ನೆರಡು ಸ್ಥಳಗಳು ರಾಜಧಾನಿಗೆ ಸಮೀಪದಲ್ಲಿವೆ. ಈ ಸ್ಥಳಗಳಿಗೆ ಭೇಟಿ ನೀಡಿ, ಯಾವುದು ಸೂಕ್ತ ಎಂಬುದನ್ನು ನಿರ್ಧರಿಸಿ ಎಂದು ಸಚಿವರು ಸಲಹೆ ಕೊಟ್ಟರು.

Advertisements

ಪೆಂಟಗಾನ್ ನಿಟ್ಕಾಂ ಬಗ್ಗೆ ಮಾಹಿತಿ ಪಡೆದ ಸಚಿವರು, “ಬಾಂಗ್ಲಾದಲ್ಲಿ ಅಲ್ಲಿನ ಸರ್ಕಾರ ಜವಳಿ ಉದ್ಯಮಕ್ಕೆ ಯಾವ ಯಾವ ಸೌಕರ್ಯ ಕಲ್ಪಿಸಿದೆ ಎಂಬ ವಿವರ ಪಡೆದರು. ಬಾಂಗ್ಲಾಗೆ ಹೋಲಿಕೆ ಮಾಡಿದರೆ ಕರ್ನಾಟಕ ಸರ್ಕಾರವೇ ಹೆಚ್ಚಿನ ಸೌಕರ್ಯ ಕಲ್ಪಿಸುತ್ತಿದೆ. ವಿದ್ಯುತ್ ಶುಲ್ಕ ಬಾಂಗ್ಲಾಗಿಂತ ಕರ್ನಾಟಕದಲ್ಲಿ ಕಡಿಮೆ ಇದೆ. ರಾಜ್ಯ ಸರ್ಕಾರ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡುತ್ತಿದೆ” ಎಂದು ತಿಳಿಸಿದರು.

ಪೆಂಟಗಾನ್ ನಿಟ್ ಕಾಂ ಬಗ್ಗೆ ಮಾಹಿತಿ ನೀಡಿದ ಮಾಲೀಕ ಬಿಪಿನ್ ಮುದ್ರಾ ಅವರು, “ವಾರ್ಷೀಕ 13 ಸಾವಿರ ಮಿಲಿಯನ್ ಡಾಲರ್ ವಹಿವಾಟು ಹೊಂದಿದ್ದು, 1980ರಿಂದ ಜವಳಿ ಕ್ಷೇತ್ರದಲ್ಲಿದ್ದೇವೆ. ಉದ್ಯಮ ವಿಸ್ತರಣೆ ಉದ್ದೇಶದಿಂದ ಕರ್ನಾಟಕದಲ್ಲಿ ಉದ್ಯಮ ಆರಂಭಿಸುವ ಅಭಿಲಾಷೆ ಹೊಂದಿದ್ದೇವೆ” ಎಂದು ಮಾಹಿತಿ ನೀಡಿದರು.

ಬಾಂಗ್ಲಾದೇಶದಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ 9 ರೂ. ಇದೆ. ಸದ್ಯದ ಪರಿಸ್ಥಿತಿ ಅಲ್ಲಿ ಜವಳಿ ಕ್ಷೇತ್ರಕ್ಕೆ ಪೂರಕ ವಾತಾವರಣ ಇಲ್ಲ. ಕರ್ನಾಟಕದ ನಂಟು ಇರುವ ಕಾರಣ ಇಲ್ಲಿ ಉದ್ಯಮ ಆರಂಭಿಸುವ ಉದ್ದೇಶ ಹೊಂದಿದ್ದೇವೆ. ಏಕಗವಾಕ್ಷಿ ಪದ್ದತಿ ಇದ್ದರೆ ಅನುಕೂಲ, ಆಡಳಿತಾತ್ಮಕವಾಗಿ ವಿಳಂಬವಾಗದಿದ್ದರೆ ತ್ವರಿತವಾಗಿ ಬಂಡವಾಳ ಹೂಡಲು ಸಿದ್ದರಿದ್ದೇವೆ” ಎಂದು ತಿಳಿಸಿದರು.

ಜವಳಿ ಇಲಾಖೆ ಆಯುಕ್ತೆ ಜ್ಯೋತಿ, ಕೆಎಸ್‌ಟಿಐಡಿಸಿ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ರವೀಂದ್ರ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X