ಇ.ಡಿ ದಾಳಿ | ಸಂಸದ ತುಕಾರಾಂ, ಶಾಸಕರಾದ ಭರತ್ ರೆಡ್ಡಿ,ಜೆ ಎನ್ ಗಣೇಶ್ ಬಂಧನ ಸಾಧ್ಯತೆ

Date:

Advertisements

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧಿಸಿದಂತೆ ಬಳ್ಳಾರಿ ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಬಂಧನ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶಾನಾಲಯ (ಇ.ಡಿ.) ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ಬಳ್ಳಾರಿ ಸಂಸದರು ಮತ್ತು ಶಾಸಕರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಸಂಡೂರು ಪಟ್ಟಣದಲ್ಲಿರುವ ಸಂಸದ ತುಕಾರಾಂ ಅವರ ನಿವಾಸ, ಸಂಡೂರು ಶಾಸಕಿ ಅನ್ನಪೂರ್ಣ, ಬಳ್ಳಾರಿ ನಗರದ ನೆಹರು ಕಾಲೋನಿಯಲ್ಲಿರುವ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರ ಕುರುಗೋಡು ಪಟ್ಟಣದ ನಿವಾಸ, ಇವರ ಆಪ್ತ ಸಹಾಯಕ ಗೋವರ್ಧನ್ ಅವರ ನಿವಾಸ ಹಾಗೂ ಕೂಡ್ಲಿಗಿ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಅವರ ಸ್ವಗ್ರಾಮ ನರಸಿಂಹಗಿರಿ ಮನೆ ಸೇರಿದಂತೆ ಹಲವೆಡೆ ಏಕಕಾಲಕ್ಕೆ ಇಡಿ ದಾಳಿ ಮಾಡಿದೆ.

Advertisements

10ಕ್ಕೂ ಹೆಚ್ಚು ಅಧಿಕಾರಿಗಳಿರುವ ಇ.ಡಿ ತಂಡವು ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ. ಶಾಸಕರ ಭವನದಲ್ಲಿರುವ ನಾಗೇಂದ್ರ ಅವರ ಕೊಠಡಿ ಮೇಲೆ ದಾಳಿ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಸಿಆರ್​ಪಿಎಫ್ ಪೊಲೀಸರ ಭದ್ರತೆಗೆ ನಿಯೋಜಿಸಲಾಗಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ 187 ಕೋಟಿ ರೂಪಾಯಿ ಹಣ ದುರ್ಬಳಕೆಯಾಗಿರುವ ಆರೋಪ ಕೇಳಿ ಬಂದಿತ್ತು. ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.

ಭರತ್‌ ರೆಡ್ಡಿಗೆ ಇಡಿ ಡ್ರೀಲ್

ದಾಳಿ ವೇಳೆ ಇಡಿ ಅಧಿಕಾರಿಗಳ ತನಿಖೆಗೆ ಭರತ್ ರೆಡ್ಡಿ ಸೂಕ್ತವಾಗಿ ಸ್ಪಂದಿಸದ ಕಾರಣ ಅಧಿಕಾರಿಗಳು ಸಿಟ್ಟಾಗಿ ದೀರ್ಘ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

ಏನಿದು ಪ್ರಕರಣ?

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು. ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ನಿಗಮದ 90 ಕೋಟಿ ಖಾಸಗಿ ಕಂಪನಿಗಳು ಮತ್ತು ವ್ಯಕ್ತಿಗಳ ಖಾತೆಗಳಿಗೆ ಅಕ್ರಮ ವರ್ಗಾವಣೆ ಆಗಿದೆ. ಆ ಅಕ್ರಮದಲ್ಲಿ ತಮ್ಮ ಪಾತ್ರವಿಲ್ಲ. ಎಲ್ಲವೂ ನಿಗಮದ ಅಧಿಕಾರಿಗಳು ಮತ್ತು ಬ್ಯಾಂಕ್‌ ಅಧಿಕಾರಿಗಳ ಸೂಚನೆಯಂತೆ ಆಗಿದೆ ಎಂದು ಬರೆಯಲಾಗಿತ್ತು. ಅಲ್ಲದೆ ತಮ್ಮ ಆತ್ಮಹತ್ಯೆಗೆ ಪ್ರಕರಣವೇ ಕಾರಣವೆಂದು, ನಿಗಮದ ಎಂಡಿ ಸೇರಿದಂತೆ ಐದು ಮಂದಿಯನ್ನು ಹೆಸರಿಸಿ, ಅವರೇ ಸಾವಿಗೆ ನೇರ ಹೊಣೆ ಎಂದು ಹೇಳಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಆರೋಪಿಯಾಗಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X