ಬಾಗಲಕೋಟೆ | ಉದ್ಯೋಗ ಕಾರ್ಡ್‌ ವಿತರಿಸುವಂತೆ ಕೂಲಿಕಾರ್ಮಿಕರ ಆಗ್ರಹ

Date:

Advertisements

ಉದ್ಯೋಗ ಖಾತರಿ ಚೀಟಿ (ಜಾಬ್‌ ಕಾರ್ಡ್) ವಿತರಿಸುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅವರು ಹಾರಿಕೆ ಮಾತುಗಳನ್ನಾಡುತ್ತಾರೆ. ಕೂಡಲೇ ಉದ್ಯೋಗ ಕಾರ್ಡ್‌ ವಿತರಣೆ ಮಾಡಬೇಕು ಎಂದು ಮನರೇಗಾ ಕಾರ್ಮಿಕ ಲಕ್ಕವ್ ತೆಗ್ಗಿ ಆರೋಪಿಸಿದರು.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕು ಅನಗವಾಡಿಯ ಗ್ರಾಮ ಪಂಚಾಯತ್ ಎದುರು ಮನರೇಗಾ ಅಡಿಯಲ್ಲಿ ಕೆಲಸ ಮಾಡಲು ಗ್ರಾಮೀಣ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್‌ ನೀಡಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಲಕ್ಕವ್ ತೆಗ್ಗಿ, “ಕಳೆದ ಎರಡು ತಿಂಗಳ ಹಿಂದೆ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಹಾಗೂ ಜಾಬ್ ಕಾರ್ಡ್ ಸಲುವಾಗಿ ಅನಗವಾಡಿ ಗ್ರಾಮ ಪಂಚಾಯಿತಿಗೆ ಹೋಗಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಅಕೌಂಟ್‌ಗಳ ಜೆರಾಕ್ಸ್ ಪ್ರತಿಗಳನ್ನು ಒದಗಿಸಿದರೂ ಕೂಡ ನಮಗೆ ಕೆಲಸ ನೀಡುತ್ತಿಲ್ಲ. ಗ್ರಾಮ ಪಂಚಾಯತಿಯವರನ್ನು ಕೇಳಿದರೆ, ಬೇಜವಾಬ್ದಾರಿ ಮಾತುಗಳನ್ನಾಡುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಲ್ಲಿಯೇ ಚಿಕ್ಕ ಮಕ್ಕಳನ್ನು ಕರೆದುಕೊಂಡು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯತಿಯವರು ಸೌಜನ್ಯಕ್ಕಾದರೂ ಬಂದು ಮಾತನಾಡಿಸಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕಾಲುವೆ ಸ್ವಚ್ಛಗೊಳಿಸುವಂತೆ ರೈತ ಸಂಘ ಆಗ್ರಹ

ತಾಲೂಕು ಪಂಚಾಯಿತಿ ಇಒ ಸಿದ್ದು ನಕ್ಕರಗುಂದಿಯವರು ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರತಿಭಟನಾಕಾರರೊಂದಿಗೆ ಮಾತನಾಡಿ, “ಒಂದು ವಾರದೊಳಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸುತ್ತೇವೆ” ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ತಾಲೂಕು ಸಂಚಾಲಕಿ ಸವಿತಾ, ಸಂಘಟಕರು ಮಸ್ತಾನ ನದಾಫ್, ಕಸ್ತೂರಿ ತೆಗ್ಗಿ, ಶಾಂತಾಭಾಯಿ ಹಿರೇಮಠ, ಮುಡಿಯವ್ವ ತೆಗ್ಗಿ, ರೇಷ್ಮಾ ನದಾಫ್, ರಾಜು ತೆಗ್ಗಿ, ಮಲ್ಲಪ್ಪ ಕಿರುಸೂರ್ ಹಾಗೂ ಸಂಘಟನೆಯ ಕಾರ್ಯಕರ್ತರು ಇದ್ದರು.

ಬಾಗಲಕೋಟೆ ಜಿಲ್ಲಾ ವಾಲೆಂಟಿಯರ್‌ ಖಾಜಾಮೈನುದ್ದಿಣ ತಹಶೀಲ್ದಾರ್ ಬೀಳಗಿ ಮಾಹಿತಿ ಆಧರಿಸಿದ ವರದಿ 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್‌ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್‌ ಹಾಗೂ ಯಾವುದೇ...

ಕಲಬುರಗಿ | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ...

ಗುಬ್ಬಿ | ಸ್ಪ್ರೇ ಮಾಡಿ ಬೈಕ್ ಸವಾರನ ಪ್ರಜ್ಞೆ ತಪ್ಪಿಸಿ ಚಿನ್ನದ ಸರ ಕದ್ದೊಯ್ದ ಖದೀಮರು

ಯುವತಿಯೊಬ್ಬಳು ರಸ್ತೆಯಲ್ಲಿ ನಿಂತು ಬೈಕ್ ನಲ್ಲಿ ಬರುವವರನ್ನು ಟಾರ್ಗೆಟ್ ಮಾಡಿ...

ಗುಬ್ಬಿ | ಧಾರ್ಮಿಕ ಸೇವಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾದ ಕೊಡಿಯಾಲದ ವೀರೇಶಾರಾಧ್ಯ

ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ತಾಲ್ಲೂಕಿನ...

Download Eedina App Android / iOS

X