ದೊಡ್ಡಬಳ್ಳಾಪುರ | ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು; ತುರ್ತು ಚಿಕಿತ್ಸೆಗೆ ಉಪಯೋಗವಿಲ್ಲದ ಪಿಎಚ್‌ಸಿ

Date:

Advertisements

ಕೃಷಿ ಹೊಂಡಕ್ಕೆ ಬಿದ್ದ ಬಾಲಕನ ಪ್ರಾಣ ರಕ್ಷಣೆ ಮಾಡಿದರೂ, ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬುಧವಾರ ನಡೆದಿದೆ.

8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಜೀವದ ಹಂಗು ತೊರೆದು ಮೇಸ್ತ್ರಿಯೊಬ್ಬರು ಬಾಲಕನನ್ನು ರಕ್ಷಣೆ ಮಾಡಿದ ಬಳಿಕ ಆತನನ್ನು ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೂ ಸೂಕ್ತ ಸಮಯಕ್ಕೆ ಪ್ರಥಮ ಚಿಕಿತ್ಸೆ ಸಿಗದ ಕಾರಣ ಹಾಗೂ ಅಲ್ಲಿಂದ ದೊಡ್ಡಬಳ್ಳಾಪುರ ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ಸಿಗದ ಹಿನ್ನೆಲೆ ಬಾಲಕ ಸಾವನ್ನಪ್ಪಿದ್ದಾನೆಂದು ಬಾಲಕನ ತಂದೆ ಹಾಗೂ ಮೇಸ್ತ್ರಿ ಸೇರಿದಂತೆ ಸ್ಥಳೀಯರು ಆರೋಪಿಸಿದ್ದಾರೆ.

ಮೃತ ಬಾಲಕನ ತಂದೆ ತಾಯಿ ಆಂಧ್ರಪ್ರದೇಶದ ಪೆನಗೊಂಡ ಬಳಿಯ ಮುದ್ದೆಪಲ್ಲಿ ಗ್ರಾಮದವರು. ಕಳೆದ ಭಾನುವಾರ ಕಟ್ಟಡ ನಿರ್ಮಾಣ ಕೆಲಸಕ್ಕೆಂದು ಕೂಲಿಯಾಳುಗಳಾಗಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ಜೊತೆಯಲ್ಲಿ ಮಕ್ಕಳನ್ನು ಕರೆದುಕೊಂಡು ಬಂದಿದ್ದು, ಇಂದು ಕೊನಘಟ್ಟ ಗ್ರಾಮದಲ್ಲಿ ಮನೆ ನಿರ್ಮಾಣ ಕೆಲಸಕ್ಕೆ ಮುಂದಾಗಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

Advertisements

ಕಟ್ಟಡ ಕೆಲಸ ನಡೆಯುತ್ತಿದ್ದ ಸ್ಥಳದ ಪಕ್ಕದಲ್ಲಿಯೇ ರೈತರೊಬ್ಬರಿಗೆ ಸೇರಿದ ಕೃಷಿ ತೋಟವಿದೆ. ಮೃತ ಬಾಲಕ ತನ್ನ ತಂಗಿ ಜೊತೆ ಶೌಚ ಕಾರ್ಯಕ್ಕೆಂದು ತೋಟಕ್ಕೆ ತೆರಳಿದ್ದಾಗ, ಬಾಲಕ ನಾಗಚೈತನ್ಯ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಆತನ ತಂಗಿ ಅಪ್ಪ ಅಮ್ಮ ಕೆಲಸ ಮಾಡುತ್ತಿದ್ದಲ್ಲಿಗೆ ಬಂದು ಸುದ್ದಿ ತಿಳಿಸಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪೌರಕಾರ್ಮಿಕನ ಮೇಲೆ ಹಲ್ಲೆ: ಮುನ್ಸಿಪಲ್ ಕಾರ್ಮಿಕರ ಸಂಘ ಪ್ರತಿಭಟನೆ

ಮೃತ ಬಾಲಕನ ತಾಯಿ ಚೀರಾಡುತ್ತಿದ್ದುದನ್ನು ಗಮನಿಸಿದ ಮೇಸ್ತ್ರಿ ತಮ್ಮಯ್ಯ ಎಂಬುವರು, ಕೃಷಿ ಹೊಂಡದ ಬಳಿ ಬಂದಿದ್ದಾರೆ. ಕೃಷಿ ಹೊಂಡಕ್ಕೆ ಧುಮಿಕಿ ಬಾಲಕನ ಪ್ರಾಣ ಕಾಪಾಡಿದ್ದಾರೆ. ತಕ್ಷಣವೇ ಬಾಲಕನನ್ನು ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲವೆಂದು ಹೇಳಿ ಅಲ್ಲಿನ ಸಿಬ್ಬಂದಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಆಸ್ಪತ್ರೆಗೆ ಬಂದಾಗ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X