ಯಾದಗಿರಿ | ಜೂ.12ರಿಂದ ನಾರಾಯಣಪೂರ ಆಣೆಕಟ್ಟೆಯಿಂದ ಕೃಷ್ಣಾನದಿಗೆ ಪ್ರವಾಹ ನೀರು ಸಾಧ್ಯತೆ : ಎಚ್ಚರಿಕೆ

Date:

Advertisements

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮುಂಗಾರು ಮಳೆಯು ಪ್ರಾರಂಭವಾಗುವ ಮುನ್ಸೂಚನೆ ಇದ್ದು, ನಾರಾಯಣಪೂರ ಆಣೆಕಟ್ಟೆಗೂ ಸಹ ಹೆಚ್ಚಿನ ಒಳಹರಿವನ್ನು ಆಲಮಟ್ಟಿ ಹಾಗೂ ಮಲಪ್ರಭಾ ಜಲಾಶಯಗಳಿಂದ ಹಾಗೂ ಈ ಜಲಾಶಯಗಳ ಕೆಳಭಾಗದಲ್ಲಿ ಬರುವ ಜಲಾನಯನ ಪ್ರದೇಶಗಳಿಂದ ನಿರೀಕ್ಷಿಸಲಾಗಿದೆ.

ʼನಾರಾಯಣಪುರ ಅಣೆಕಟ್ಟೆಗೆ ಹರಿದು ಬರುವ ಒಳಹರಿವಿನ ಪರಿಮಾಣಾಕ್ಕನುಗುಣವಾಗಿ ನಾರಾಯಣಪೂರ ಆಣೆಕಟ್ಟೆಯಿಂದ ಕೃಷ್ಣಾ ನದಿಗೆ ಜೂ 12 ರಿಂದ ಯಾವುದೇ ಕ್ಷಣದಲ್ಲಿ ಪ್ರವಾಹದ ನೀರನ್ನು ಹರಿಬಿಡುವ ಸಾಧ್ಯತೆ ಇರುತ್ತದೆ ಎಂದು ಕೃಭಾಜನಿನಿ ಅಧೀಕ್ಷಕ ಅಭಿಯಂತರ ರಮೇಶ ಜಿ. ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನಾರಾಯಣಪೂರ ಆಣೆಕಟ್ಟೆಯ ಕೆಳಭಾಗದ ಕೃಷ್ಣಾ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಜಾಗೃತೆಯಿಂದ ಇರಲು, ತಮ್ಮ ಜನ-ಜಾನುವಾರು, ಪಂಪ್ ಸೆಟ್ ಇತ್ಯಾದಿ ವಸ್ತುಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಲು ಹಾಗೂ ಸುರಕ್ಷತೆಗಾಗಿ ನದಿಪಾತ್ರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಜಾಗ್ರತೆ ಮುನ್ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

Advertisements

ಇದನ್ನೂ ಓದಿ : ಬೀದರ್‌ | ಕಳೆದ ಮೂರು ವರ್ಷದಲ್ಲಿ 39 ಬಾಲ ಕಾರ್ಮಿಕರ ರಕ್ಷಣೆ : ಬೇಕಿದೆ ಇನ್ನಷ್ಟು ಬಿಗಿ ಕ್ರಮ!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X