ಬಳ್ಳಾರಿ | ನಕಲಿ ವೈದ್ಯರ ಎರಡು ಕ್ಲಿನಿಕ್ ಸೀಜ಼್: ಡಿಎಚ್‌ಒ ಯಲ್ಲಾ ರಮೇಶ್ ಬಾಬು ಕ್ರಮ

Date:

Advertisements

ಯಾವುದೇ ವೈದ್ಯಕೀಯ ಪದವಿ ಪಡೆಯದೆ ಔಷಧಿಗಳ ಮಾಹಿತಿ ಪಡೆದುಕೊಂಡು ತಾವು ವೈದ್ಯರೆಂದು ಸುಳ್ಳು ಹೇಳಿಕೊಂಡು ಕೊಳಗಲ್ಲು ಗ್ರಾಮದಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಸೀಜ಼್ ಮಾಡಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.

“ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸೂಚನೆ ಮೇರೆಗೆ ಬಳ್ಳಾರಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ಲಾ ಆರ್ ನೇತೃತ್ವದ ತಂಡವು ಕುರುಗೋಡು ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಎರಡು ನಕಲಿ ಕ್ಲಿ‌ನಿಕ್‌ಗಳನ್ನು ಸೀಜ಼್ ಮಾಡಿದೆ” ಎಂದು ಡಿಎಚ್‌ಒ ಯಲ್ಲಾ ರಮೇಶ್ ಬಾಬು ತಿಳಿಸಿದರು.

“ಸಾರ್ವಜನಿಕರಿಗೆ ತಾವು ವೈದ್ಯರೆಂದು ನಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೆ ಕೇವಲ ಪಿಯುಸಿವರೆಗೂ ಓದಿಕೊಂಡು ಔಷಧಿಗಳ ಬಗ್ಗೆ ಮಾಹಿತಿ ಪಡೆದು, ಜನತೆಗೆ ಚಿಕಿತ್ಸೆ ನೀಡುತ್ತಿದ್ದ ಮಹೇಶ್ ಕ್ಲಿನಿಕ್, ಮೆಹಬೂಬ್ ಭಾಷಾ ಕ್ಲಿನಿಕ್‌ಗಳನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

Advertisements

“ಸಾರ್ವಜನಿಕರು ತಮ್ಮ ಆರೋಗ್ಯದ ದೃಷ್ಟಿಯಿಂದ ಅಧಿಕೃತ ಎಂಬಿಬಿಎಸ್‌ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸಬೇಕು. ಅವರಿಂದಲೇ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವೃಕ್ಷಥಾನ್ ಹೆರಿಟೇಜ್‌ ರನ್‌ ಸಿದ್ಧತೆಗೆ ಮಹಾಂತೇಶ ಬಿರಾದಾರ ಸೂಚನೆ

“ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬಂದಲ್ಲಿ ಅವರ ವೈದ್ಯಕೀಯ ಪದವಿ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ ನಕಲಿ ವೈದ್ಯರೆಂದು ಕಂಡುಬಂದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ಕ್ರಮ ಜರುಗಿಸಬಹುದಾಗಿದೆ” ಎಂದು ಹೇಳಿದ್ದಾರೆ.

ಕುರುಗೋಡು ವೈದ್ಯಾಧಿಕಾರಿ ಡಾ ಮಂಜುನಾಥ ಜವಳಿ, ಜಿಲ್ಲಾ ಕೆಪಿಎಂಇ ವಿಭಾಗದ ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್, ಗೋಪಾಲ್ ಕೆ ಹೆಚ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X