ಬೀದರ್‌ | ಖಾಸಗಿ ಶಾಲಾ, ಕಾಲೇಜು ಡೊನೇಷನ್ ಹಾವಳಿ ತಡೆಗೆ ನಮ್ಮ ಕರ್ನಾಟಕ ಸೇನೆ ಆಗ್ರಹ

Date:

Advertisements

ಬೀದರ್ ಜಿಲ್ಲೆಯಲ್ಲಿ ಖಾಸಗಿ ಶಾಲಾ, ಕಾಲೇಜುಗಳ ಡೊನೇಷನ್ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್ ನಗರದಲ್ಲಿ ಬುಧವಾರ ಇಲಾಖೆಯ ಅಧಿಕಾರಿಗೆ ಸಲ್ಲಿಸಿದರು.‌

ʼಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಮಾತನಾಡಿ, ʼಶುಲ್ಕದ ವಿಚಾರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಇಲಾಖೆಯ ನಿಯಮ ಗಾಳಿ ತೂರುತ್ತಿವೆ. ಬಸ್‍ಗಾಗಿ ವಿದ್ಯಾರ್ಥಿಗಳ ಪಾಲಕರಿಂದ ಪ್ರತ್ಯೇಕ ಶುಲ್ಕ ವಸೂಲಿ ಮಾಡುತ್ತಿವೆ. ಅದಾಗಿಯೂ ಬಸ್/ವ್ಯಾನ್‍ಗಳಲ್ಲಿ ಸೀಟು ಸಿಗದೆ ಮಕ್ಕಳು ಜೋತಾಡಿಕೊಂಡು ಹೋಗುವ ಪರಿಸ್ಥಿತಿ ಇದೆʼ ಎಂದು ದೂರಿದರು.

Advertisements

ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಪೀಡಿಸುತ್ತಿವೆ. ಶಾಲಾ ಕಾಲೇಜುಗಳ ಶುಲ್ಕದ ಹೊರೆ ತಾಳದೆ ಬಡ ಹಾಗೂ ಮಧ್ಯಮ ವರ್ಗದ ಪಾಲಕರು ಆತ್ಮಹತ್ಯೆ ಮಾಡಿಕೊಂಡ ನಿದರ್ಶನಗಳಿವೆ. ಮಳೆಗಾಲದಲ್ಲಿ ಮಾತ್ರ ಮೇಲೇಳುವ ನಾಯಿ ಕೊಡೆಗಳಂತೆ ಖಾಸಗಿ ಶಾಲಾ, ಕಾಲೇಜುಗಳು ತಲೆ ಎತ್ತುತ್ತಿರುವುದು ಆಘಾತಕಾರಿ. ಖಾಸಗಿ ಶಾಲಾ, ಕಾಲೇಜು ನಡೆಸುವ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪಾರವಾಗಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾಗಿದೆ. ಆದರೆ, ಶಿಕ್ಷಣ ಇಲಾಖೆ ಮೌನವಾಗಿರುವುದನ್ನು ಗಮನಿಸಿದರೆ ಇಲಾಖೆ ಖಾಸಗಿ, ಶಾಲಾ ಕಾಲೇಜುಗಳೊಂದಿಗೆ ಶಾಮೀಲಾದಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆʼ ಎಂದು ಆರೋಪಿಸಿದರು.

ʼಸರ್ಕಾರದ ಮಾನದಂಡಗಳನ್ನು ಅನುಸರಿಸದ ಶಾಲಾ, ಕಾಲೇಜುಗಳನ್ನು ಮುಲಾಜಿಲ್ಲದೆ ಮುಚ್ಚಿಸಬೇಕು. ಇಲ್ಲವಾದಲ್ಲಿ ಶಿಕ್ಷಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ಸೇನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಸಂಘಟನಾ ಕಾರ್ಯದರ್ಶಿಗಳಾದ ಜಿತೇಂದ್ರ ರಾಠೋಡ್, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ನಗರ ಘಟಕದ ಅಧ್ಯಕ್ಷ ಸಂತೋಷ್ ಪಾಟೀಲ, ಸಂತೋಷ ಮಳಚಾಪುರೆ, ಮಂಜುನಾಥ ಪಾಟೀಲ, ರಾಮಶೆಟ್ಟಿ ಹುಣಜೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X