ದಾವಣಗೆರೆ | ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿರುವ ಹಳಬರ ಬದಲು ಹೊಸಬರಿಗೆ ಸಚಿವ ಸ್ಥಾನ ನೀಡಿ: ಶಾಸಕ ಬಸವರಾಜು ಶಿವಗಂಗಾ

Date:

Advertisements

“ಸಚಿವ ಸಂಪುಟ ಪುನರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿ ಹೋಗಿರುವ ಹಳಬರನ್ನು ಸಚಿವ ಸ್ಥಾನದಿಂದ ತೆಗೆದು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಬೇಕು” ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ ಅಭಿಪ್ರಾಯಪಟ್ಟರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೈಕಮಾಂಡ್ ಈಗಿನ ಸಚಿವರ ರಿಪೋರ್ಟ್ ನೋಡಿ ಅವರನ್ನೆಲ್ಲ ಕೈ ಬಿಡಬೇಕು. ಸಂಪುಟದಲ್ಲಿ 8 ರಿಂದ 10 ಜನರನ್ನು ಬಿಡಬೇಕು” ಎಂದು ತಿಳಿಸಿದರು.

ಸಚಿವ ಸಂಪುಟ ಪುನರ್ರಚನೆ ವಿಚಾರವಾಗಿ ರೀತಿ ಪ್ರತಿಕ್ರಿಯೆ ನೀಡಿದ ಅವರು “ಹೊಸ ಮುಖಗಳಿಗೆ ಅವಕಾಶ ಕೊಡಬೇಕು. 5 ರಿಂದ 6 ಬಾರಿ ಗೆದ್ದ ಶಾಸಕರುಗಳು ಇದುವರೆಗೂ ಸಚಿವರಾಗಿಲ್ಲ. ಅವರಿಗೂ ಸಚಿವ ಸ್ಥಾನ ಸಿಗಬೇಕು. ಎರಡು ವರ್ಷದ ಸಾಧನೆ ಎಂದು ಹೇಳುತ್ತಾರೆ. ಆದರೆ ಕೆಲವು ಸಚಿವರು ಏನು ಸಾಧನೆ ಮಾಡಿಲ್ಲ. ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ರಾಜ್ಯದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಾರೆ. ಹಳಬರಿಗೆ ಸಚಿವ ಸ್ಥಾನಕ್ಕೆ ಕೋಕ್ ಕೊಟ್ರೆ ಒಳ್ಳೆಯದು. ಹಳಬರು ಅಧಿಕಾರ ಅನುಭವಿಸಿ ಜಿಡ್ಡು ಹಿಡಿದು ಹೋಗಿದ್ದಾರೆ” ಎಂದು ಹೇಳಿದರು.

“ನಾನೇನು ಸನ್ಯಾಸಿಯಲ್ಲ, ನನಗೂ ಅಧಿಕಾರಿ ಕೊಟ್ಟರೆ ನಿಭಾಯಿಸುವೆ.‌ ಹೈಕಮಾಂಡ್ ಸಚಿವ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ. ಮಾತ್ರವಲ್ಲ ನಾನು ಆರು ತಿಂಗಳಲ್ಲಿ ಏನ್ ಕೆಲಸ ಮಾಡ್ತಿನಿ ಎಂದು ಬಾಂಡ್
ಬೇಕಾದ್ರೆ ಕೊಡುತ್ತೇನೆ” ಎಂದರು.

Advertisements

“ಜಿಲ್ಲೆಯಲ್ಲಿ ಹಿರಿಯ ಶಾಸಕ ಡಿ.ಜಿ.ಶಾಂತನಗೌಡ್ರು ಇದ್ದಾರೆ. ಅವರು ಹಿರಿಯ ರಾಜಕಾರಣಿ
ಅವರಿಗೆ ಕೊಟ್ರೆ ನಾನು ಖುಷಿ ಪಡುತ್ತೇನೆ. ಒಂದು ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಡಬಾರದು ಎಂದೇನಿಲ್ಲ. ಹೈಕಮಾಂಡ್ ಈಗಿನ ಸಚಿವರ ರಿಪೋರ್ಟ್ ನೋಡಿ, ಕೆಲವರನ್ನು ಕೈ ಬಿಡಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಉಪವಿಭಾಗಾಧಿಕಾರಿಗಳ ಭರವಸೆ ಹಿನ್ನೆಲೆ ಅನಾಥ ಸೇವಾಶ್ರಮ ಅವ್ಯವಹಾರ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ

“ಎರಡೂವರೆ ವರ್ಷ ಅಧಿಕಾರ ಹಂಚಿಕೆ ವಿಚಾರ ಕುರಿತು ಈಗ ಮಾತನಾಡುವುದು ಬೇಡ. ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರು ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಉತ್ತಮ ಆಡಳಿತ, ಉತ್ತಮ ಮಳೆ,
ಬೆಳೆ ಇದೆ. ಈಗ ಈ ವಿಷಯ ಕುರಿತು ಚರ್ಚೆ ಮಾಡುವುದು ಬೇಡ” ಎಂದು ಅಧಿಕಾರ ಹಂಚಿಕೆ ಕುರಿತು ಮೌನವಹಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X