ಹಾವೇರಿ | ಅಂಗನವಾಡಿ, ಪ್ರಾಥಮಿಕ ಶಾಲೆಗಳಲ್ಲಿ ಅವೈಜ್ಞಾನಿಕ ರ‌್ಯಾಂಪ್‌ ನಿರ್ಮಾಣ: ಕರವೇ ಸ್ವಾಭಿಮಾನಿ ಬಣ ಆರೋಪ

Date:

Advertisements

ಶಾಲೆಗಳಲ್ಲಿ(ಚುನಾವಣೆ ಮತಗಟ್ಟೆ) ಕೇಂದ್ರಗಳ ಮುಂಭಾಗದಲ್ಲಿ ನಿರ್ಮಿಸಲಾಗಿರುವ ryampaಗಳು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕೂಡಲೇ ಇವುಗಳನ್ನು ದುರಸ್ತಿ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕದಿಂದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ ಪಂಚಾಯಿತಿ ಮುಖ್ಯಾಧಿಕಾರಿ ಸಂತೋಷ ಚಂದ್ರಕೇರ ಮತ್ತು ತಹಸೀಲ್ದಾ‌ರ್ ಕಚೇರಿಯ ಶಿರಸ್ತೆದಾರ ಜಗತಾಫ್ ಅವರಿಗೆ ಮನವೆ ಸಲ್ಲಿಸಿದರು.

ಮನವಿ ಸಲ್ಲಿಸಿ ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠ ಮತ್ತು ಉಪಾಧ್ಯಕ್ಷ ಯೂಸೂಫ್ ಸೈಕಲ್‌ಗಾರ ಮಾತನಾಡಿ, “ರಟ್ಟಿಹಳ್ಳಿ ಪಟ್ಟಣದಲ್ಲಿ  ಸರಿ ಸುಮಾರು 10-12 ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಯಲ್ಲಿರುವ ಚುನಾವಣಾ ಮತಗಟ್ಟೆ ಹೆಸರಿನಲ್ಲಿ ನಿರ್ಮಿಸಲಾಗಿರುವ ರಾಂಪ್‌ಗಳು ಸಂಪೂರ್ಣವಾಗಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದರಿಂದ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಯ ಮಕ್ಕಳಿಗೆ, ಶಿಕ್ಷಕರುಗಳಿಗೆ ವಿಶೇಷವಾಗಿ ಗರ್ಭೀಣಿಯರು, ಬಾಣಂತಿಯರು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

“ಚುನಾವಣಾ ಮತಗಟ್ಟೆಗೆಂದು ಶಾಲೆಯಲ್ಲಿ ನಿರ್ಮಿಸಿರುವ ರ‌್ಯಾಂಪ್‌ಗಳು ವೃದ್ಧರಿಗೆ ವಿಶೇಷ ಚೇತನರಿಗೆ ಅನುಕೂಲವಾಗುವ ಬದಲು ಸಮಸ್ಯೆಯಾಗುವಂತೆ ಕಂಡು ಬರುತ್ತಿವೆ. ಕೂಡಲೇ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ತೊಂದರೆಯಾಗುವಂತಿರುವ ರ‌್ಯಾಂಪ್‌ಗಳನ್ನು ತೆರವುಗೊಳಿಸಿ ಪುನಃ ಅನುಕೂಲವಾಗುವಂತೆ ರ‌್ಯಾಂಪ್‌ಗಳನ್ನು ನಿರ್ಮಿಸಬೇಕು. ಇಲ್ಲದೇ ಇದ್ದರೆ ಕರವೇ ಯಿಂದ ಕ್ಯಾಂಪ್‌ಗಳನ್ನು ತೆರವುಗೊಳಿಸುವುದಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಡಿ.ವಾಯ್.ಎಫ್.ಐ ಮನವಿ

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣ ಮಹಿಳಾ ಅಧ್ಯಕ್ಷರು ಗೀತಾಬಾಯಿ ಲಮಾಣಿ, ಮುಖಂಡರು ರಾಮಚಂದ್ರಪ್ಪ ಹಿಂಡಸಗಟ್ಟಿ, ಖಲಂದರ ಎತ್ತಿನಹಳ್ಳಿ,, ಪ್ರಕಾಶ ಡಂಬರ್, ರಾಜೇಸಾಬ ಮಾನೇಗಾರ, ಈರಪ್ಪ ಅಂಗಡಿ, ಶೇಖಪ್ಪ ಕಟ್ಟೇಕಾರ, ಆಶೀಫ್ ಬಣಕಾರ, ಶಫಿ ಹಾವೇರಿ, ಅಲತಾಫ್ ಜಂಬೂರ, ಇರ್ಪಾನ್ ಪುರದಕೇರಿ, ತೌಶೀಫ್ ಸೈಕಲ್‌ಗಾರ, ನೂರ್ ಮಕಂದಾರ, ಜ್ಯೋತಿ ಅಂಸಾಲಿ, ಅನೀಲ್ ಬಾವರ್‌ಕ‌ರ್, ಯಾಸೀನ್ ರಟ್ಟಿಹಳ್ಳಿ, ಹೆಡಿಯಾಲ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X