ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಏರ್ ಇಂಡಿಯಾ 379 ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಥಾಯ್ಲೆಂಡ್ನ ಫುಕೆಟ್ ದ್ವೀಪದಿಂದ ದೆಹಲಿಗೆ ವಿಮಾನ ತೆರಳುತ್ತಿದ್ದ ಸಂದರ್ಭದಲ್ಲಿ ಬಾಂಬ್ ಬೆದರಿಕೆ ಬಂದಿದೆ. ಹೀಗಾಗಿ ಥೈಲ್ಯಾಂಡ್ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ವಿಮಾನದಲ್ಲಿ 156 ಪ್ರಯಾಣಿಕರಿದ್ದರು. ವಿಮಾನ ಸಿಬ್ಬಂದಿ ಎಲ್ಲ ಪ್ರಯಾಣಿಕರನ್ನು ಹೊರಕ್ಕೆ ಕರದುಕೊಂಡು ಬಂದಿದ್ದಾರೆ. ಪ್ರಾಥಮಿಕ ಶೋಧದ ವೇಳೆ ಏರ್ ಇಂಡಿಯಾ ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.