ವಿಮಾನ ಅಪಘಾತದ ಮೃತರಿಗೆ ದಕ್ಷಿಣ ಆಫ್ರಿಕಾ – ಆಸ್ಟ್ರೇಲಿಯಾ ಆಟಗಾರರಿಂದ ಗೌರವ ಸಲ್ಲಿಕೆ

Date:

Advertisements

ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯೂಟಿಸಿ) ಫೈನಲ್‌ ಪಂದ್ಯ ಆಡುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಆಟಗಾರರು ಮೌನಾಚರಣೆ ಹಾಗೂ ಕಪ್ಪು ಪಟ್ಟಿ ಧರಿಸುವ ಮೂಲಕ ಗೌರವ ಸಲ್ಲಿಸಿದರು.

ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಡಬ್ಲ್ಯೂಟಿಸಿ ಫೈನಲ್‌ನ ಮೂರನೇ ದಿನದಾಟಕ್ಕೂ ಮುನ್ನ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದ ಆಟಗಾರರು ಒಂದು ನಿಮಿಷ ಮೌನ ಆಚರಿಸಿದರು. ಅಲ್ಲದೆ ತೋಳಿಗೆ ಕಪ್ಪು ಪಟ್ಟಿ ಮೈದಾನಕ್ಕಿಳಿದರು.

ಗುರುವಾರ ಮಧ್ಯಾಹ್ನ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು.

Advertisements

ಈ ದುರಂತದಲ್ಲಿ ವಿಮಾನದಲ್ಲಿದ್ದ ವಿಮಾನದಲ್ಲಿದ್ದ 241 ಜನರು ಸಾವನ್ನಪ್ಪಿ, ಒಬ್ಬರು ಮಾತ್ರ ಬದುಕುಳಿದರು. ವಿಮಾನವು ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ಕಾರಣ ಸಾವಿನ ಸಂಖ್ಯೆ 265 ಕ್ಕೆ ಏರಿದೆ.

ಇದನ್ನು ಓದಿದ್ದೀರಾ? ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್‌ | ರಬಾಡ ಮಾರಕ ದಾಳಿ; 212 ರನ್‌ಗಳಿಗೆ ಆಸೀಸ್‌ ಆಲೌಟ್

ವಿಮಾನಯಾನ ಸಂಸ್ಥೆಯ ಪ್ರಕಾರ, 230 ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸರು ಮತ್ತು ಒಬ್ಬ ಕೆನಡಾದವರು ಹಾಗೂ 12 ವಿಮಾನಯಾನ ಸಿಬ್ಬಂದಿ ವಿಮಾನದಲ್ಲಿದ್ದರು.

144/8 ರನ್‌ನೊಂದಿಗೆ ಮೂರನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡ ಪಾನೀಯ ವಿರಾಮದ ವೇಳೆಗೆ 65 ಓವರ್‌ಗಳಲ್ಲಿ 207 ರನ್‌ ಗಳಿಸಿ ಆಲೌಟ್‌ ಆಗುವುದರೊಂದಿಗೆ 281 ರನ್‌ ಮುನ್ನಡೆ ಗಳಿಸಿದೆ. ಕೊನೆಯವರೆಗೂ ಉತ್ತಮ ಆಟವಾಡಿದ ಮಿಷಲ್‌ ಸ್ಟಾರ್ಕ್‌ 5 ಬೌಂಡರಿಗಳೊಂದಿಗೆ ಅಜೇಯ 58 ರನ್‌ ಗಳಿಸಿದರು.

2023 ರಲ್ಲಿ ಭಾರತವನ್ನು ಫೈನಲ್‌ನಲ್ಲಿ ಸೋಲಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಆಗಿದ್ದ ಆಸ್ಟ್ರೇಲಿಯಾ ತನ್ನ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಉಳಿಸಿಕೊಳ್ಳಬೇಕಾದರೆ 281 ರನ್‌ಗಳೊಳಗೆ ಹರಿಣಗಳ ತಂಡವನ್ನು ಕಟ್ಟಿಹಾಕಬೇಕು. ದಕ್ಷಿಣ ಆಫ್ರಿಕಾ ಮೊದಲ ಐಸಿಸಿ ಗೆಲ್ಲಬೇಕಾದರೆ ಆಸೀಸ್‌ ನೀಡಿರುವ 281 ರನ್‌ ಗುರಿಯನ್ನು ದಾಟಬೇಕಿದೆ. ಪಿಚ್‌ ಬೌಲರ್‌ಗಳಿಗೆ ಸೂಕ್ತವಾಗಿರುವುದರಿಂದ ಪಂದ್ಯ ಬೇಗನೆ ಮುಗಿಯುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X