ಕಿಚ್ಚು ಹಚ್ಚಿದ ಮಣಿಪುರದ ವಿಡಿಯೋ : ದೇಶಾದ್ಯಂತ ಪ್ರತಿಭಟನೆ

Date:

Advertisements
  • ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು
  • ಘಟನೆಯನ್ನು ಖಂಡಿಸಿ, ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ ಬಾಲಿವುಡ್

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ, ಮೆರವಣಿಗೆ ಮಾಡಿದ ವಿಡಿಯೋ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದು, ಮಣಿಪುರ ಸೇರಿದಂತೆ ಹಲವೆಡೆ ಬೃಹತ್ ಪ್ರತಿಭಟನೆಗೆ ನಾಂದಿ ಹಾಡಿದೆ.

ವಿಡಿಯೋ ಹೊರಬರುತ್ತಿದಂತೆಯೇ ಮಣಿಪುರದಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗುವ ಸಾಧ್ಯತೆಯ ನಡುವೆಯೇ ಚುರಾಚಂದ್‌ಪುರದ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಲಾಯಿತು.

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಲು ಸರ್ಕಾರವೇ ಎಂದು ಆರೋಪಿಸಿರುವ ಬುಡಕಟ್ಟು ಸಮುದಾಯದ ಜನರು, ನಮಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ನೀಡುವಂತೆ ಒತ್ತಾಯಿಸಿದರು.

Advertisements

ಚುರಾಚಂದ್‌ಪುರದ ಸಾರ್ವಜನಿಕ ಮೈದಾನದಲ್ಲಿ ಕಪ್ಪು ಬಟ್ಟೆ ಧರಿಸಿದ್ದ ಸಾವಿರಕ್ಕೂ ಹೆಚ್ಚು ಜನರು ಮಳೆ ಸುರಿಯುತ್ತಿದ್ದರೂ ಶಾಂತಿಯುತ ರ‌್ಯಾಲಿ ನಡೆಸಿ, ಬಿರೇನ್ ಸರಕಾರ ಕೆಳಗಿಳಿಯಬೇಕೆಂದು ಒತ್ತಾಯಿಸಿದರು.

ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳಾ ಕಾಂಗ್ರೆಸ್ ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ, ಕರೆದೊಯ್ದರು.

ಮಣಿಪುರದ ಘಟನೆಯ ಬಗ್ಗೆ ಹಲವಾರು ಸಂಘಟನೆಗಳು, ನಾಗರಿಕ ಸಮಾಜಗಳು, ರಾಜಕೀಯ ಮುಖಂಡರು ಮತ್ತು ಬಾಲಿವುಡ್ ನಟ-ನಟಿಯರೂ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಇದು ಅತ್ಯಂತ ಅಮಾನವೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.

‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವೀಡಿಯೋ ನೋಡಿ ಬೆಚ್ಚಿಬಿದ್ದೆ, ಜಿಗುಪ್ಸೆ ಉಂಟಾಯಿತು. ತಪ್ಪಿತಸ್ಥರಿಗೆ ಘೋರ ಶಿಕ್ಷೆ ಸಿಗಬೇಕು. ಆ ಶಿಕ್ಷೆ ಹೇಗಿರಬೇಕು ಎಂದರೆ ಅದನ್ನು ನೋಡಿ ಮುಂದೆ ಯಾರೂ ಇಂಥ ತಪ್ಪು ಮಾಡುವ ಬಗ್ಗೆ ಆಲೋಚನೆಯನ್ನೂ ಮಾಡಬಾರದು’ ಎಂದು ನಟ ಅಕ್ಷಯ್ ಕುಮಾರ್ ಹೇಳಿಕೆ ನೀಡಿದ್ದಾರೆ.

‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ಭಯಾನಕವಾಗಿದೆ. ಇದು ನನ್ನನ್ನು ಬೆಚ್ಚಿಬೀಳಿಸಿದೆ. ಮಹಿಳೆಯರಿಗೆ ಆದಷ್ಟು ಬೇಗ ನ್ಯಾಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಲಿ’ ಎಂದು ನಟಿ ಕಿಯಾರಾ ಅಡ್ವಾಣಿ ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X