ಉಡುಪಿ | ವಿಮಾನಯಾನ ಕ್ಷೇತ್ರದಲ್ಲಿ ಸುರಕ್ಷತೆ ಮುಂಚೂಣಿಯ ಆದ್ಯತೆಯಾಗಲಿ – ಜಿಲ್ಲಾ ಮುಸ್ಲಿಂ ಒಕ್ಕೂಟ

Date:

Advertisements

ನಿನ್ನೆ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತವು ಇಡೀ ರಾಷ್ಟ್ರದ ಮನಸ್ಸಿಗೆ ಆಘಾತ ನೀಡಿದ ದುರಂತ. ಅನೇಕ ಅಮೂಲ್ಯ ಜೀವಗಳ ನಷ್ಟದಿಂದ ಕೂಡಿದ ಈ ಅಪಾಯದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಆತ್ಮಕ್ಕೆ ಶಾಂತಿ ಲಭಿಸಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲೆಂದು ನಾವು ಪ್ರಾರ್ಥಿಸುತ್ತೇವೆ ಎಂದು ಉಡುಪಿ ಜಿಲ್ಲಾ ‌ಮುಸ್ಲೀಮ್ ಒಕ್ಕೂಟದ ಅಧ್ಯಕ್ಷರಾದ ಮಹಮ್ಮದ್ ಮೌಲಾ‌ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂತಹ ಆಪತ್ತುಗಳು ಅನೇಕ ಕುಟುಂಬಗಳನ್ನು ಒಂದೇ ಕ್ಷಣದಲ್ಲಿ ಅಂಧಕಾರಕ್ಕೆ ತಳ್ಳುತ್ತವೆ. ಆ ಕುಟುಂಬಗಳ ನೋವನ್ನು ಮರೆಯುವಷ್ಟು ಸುಲಭವಲ್ಲ. ಗಾಯಗೊಂಡವರಿಗೂ ಶೀಘ್ರ ಗುಣಮುಖ ಆಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಅಪಘಾತದ ಸತ್ಯ ಅನಾವರಣಗೊಳ್ಳಬೇಕೆಂಬುದು ನಮ್ಮ ಸ್ಪಷ್ಟ ನಿಲುವು. ವಿಮಾನಯಾನ ಕ್ಷೇತ್ರದಲ್ಲಿ ಸುರಕ್ಷತೆ ಮುಂಚೂಣಿಯ ಆದ್ಯತೆ ಆಗಬೇಕು. ಇಂತಹ ದುರ್ಘಟನೆಗಳು ಪುನರಾವೃತ್ತವಾಗದಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X