ಶಿವಮೊಗ್ಗ | ಮಳೆ ಸಮಸ್ಯೆಯ ವರದಿ ಅಣ್ಣ-ತಮ್ಮಂದಿರ ಮನಸ್ತಾಪ: ತುಪ್ಪೂರು ಗ್ರಾಮ ಪಂಚಾಯತ್ ಪಿಡಿಒ

Date:

Advertisements

ವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೊರಗಿ ಎಂಬ ಗ್ರಾಮದಲ್ಲಿ ಮಳೆ ಅವಾಂತರದ ಬಗ್ಗೆ ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಈದಿನ ಡಾಟ್ ಕಾಮ್ ‘ಶಿವಮೊಗ್ಗ | ತುಪ್ಪೂರಿನ ಕೊರಗಿಯಲ್ಲಿ ಮಳೆ ಅವಾಂತರ: ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ’ ಎಂದು ಜೂನ್ 12ರಂದು ವರದಿ ಮಾಡಿತ್ತು. ಆ ಬಳಿಕ ಸ್ಥಳಕ್ಕೆ ಭೇಟಿ ನೀಡಿರುವ ತುಪ್ಪೂರು ಗ್ರಾಮ ಪಂಚಾಯತ್‌ನ ಅಧಿಕಾರಿಗಳು, ಜನಪ್ರತಿನಿಧಿಗಳು, “ಈ ಸಮಸ್ಯೆಯು ಅಣ್ಣ-ತಮ್ಮಂದಿರ ವೈಯಕ್ತಿಕ ಮನಸ್ತಾಪ. ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪತ್ರದ ಮೂಲಕ ಮಾಹಿತಿ ನೀಡಿರುವ ಗ್ರಾಮ ಪಂಚಾಯತ್ ಪಿಡಿಒ ಜಯಶ್ರೀ, “ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲೂಕು ಕುಂಸಿ ಹೋಬಳಿ ತುಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಗಿ ಗ್ರಾಮದಲ್ಲಿ ಮಳೆಯ ಅವಾಂತರ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಎಂದು ಸೋಷಿಯಲ್ ಮೀಡಿಯದಲ್ಲಿ ಈ ದಿನ ಮಾಧ್ಯಮವು ವರದಿ ಮಾಡಿತ್ತು. ಈ ಕುರಿತು ಕೊರಗಿ ಗ್ರಾಮಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತುಪ್ಪೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸ್ಥಳ ಪರಿಶೀಲನೆ ಮಾಡಿದ್ದೇವೆ. ಈ ವಿಚಾರವು ಸಂಪೂರ್ಣವಾಗಿ ಅಣ್ಣ-ತಮ್ಮಂದಿರ ವೈಯಕ್ತಿಕ ಮನಸ್ತಾಪದ ಜಗಳ” ಎಂದು ತಿಳಿಸಿದ್ದಾರೆ.

WhatsApp Image 2025 06 13 at 8.44.01 PM 1

“ಅಣ್ಣ-ತಮ್ಮಂದಿರ ವೈಯಕ್ತಿಕ ಮನಸ್ತಾಪದ ಜಗಳವನ್ನು ಗ್ರಾಮ ಪಂಚಾಯಿತಿಗೆ ವಿಷಯ ತಿಳಿಸಿಲ್ಲ. ಅಲ್ಲದೇ, ಇದನ್ನು ನೇರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದಾರೆ. ಈ ವಿಷಯ ತಿಳಿದ ತಕ್ಷಣ ಸ್ಥಳ ಪರಿಶೀಲಿಸಿ ವಿಜಯ ಇವರ ಜಮೀನಿನಲ್ಲಿ ಇರುವ ಕಾಲುವೆಯಲ್ಲಿ ಕಸ ಕಟ್ಟಿಕೊಂಡಿದ್ದು. ಆ ಕಸವನ್ನು ತೆಗೆಸಿ ನೀರು ಸರಾಗವಾಗಿ ಹರಿಯುವಂತೆ ಕಾಲುವೆ ಸರಿಪಡಿಸಲಾಗಿದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ತಿಳಿಸಲಾಗಿದೆ. ಜಮೀನಲ್ಲಿರುವ ಕಾಲುವೆಗೆ ಪೈಪ್ ಹಾಕಿಕೊಳ್ಳುವಂತೆ ತಿಳಿಸಲಾಯಿತು” ಎಂದು ಪಿಡಿಒ ಜಯಶ್ರೀ ಮಾಹಿತಿ ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಶಿವಮೊಗ್ಗ | ತುಪ್ಪೂರಿನ ಕೊರಗಿಯಲ್ಲಿ ಮಳೆ ಅವಾಂತರ: ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

“ಇನ್ನು ಮುಂದೆ ಏನಾದರೂ ಸಮಸ್ಯೆಗಳು ಸಂಭವಿಸಿದಲ್ಲಿ ನೇರವಾಗಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗೆ ತಿಳಿಸುವಂತೆಯೂ, ತಿಳಿಸಿದಲ್ಲಿ ಸಮಸ್ಯೆ ಪರಿಹರಿಸಲು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯು ಯಾವ ಸಮಯದಲ್ಲಾದರು ಸಾರ್ವಜನಿಕರ ಜೊತೆ ನಿಲ್ಲುವುದಾಗಿ ಅಲ್ಲಿನ ಜನರಿಗೆ ತಿಳಿಸಲಾಯಿತು” ಎಂದು ತುಪ್ಪೂರು ಗ್ರಾಮ ಪಂಚಾಯತ್ ಪಿಡಿಒ ಜಯಶ್ರೀ ಅವರು ಶಿವಮೊಗ್ಗ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2025 06 13 at 8.44.01 PM
ಭಾರದ್ವಾಜ್
ರಾಘವೇಂದ್ರ, ಶಿವಮೊಗ್ಗ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X