ವಿಮಾನ ದುರಂತ | ಭವಿಷ್ಯದಲ್ಲಿ ಸಂಭವಿಸುವ ಅನಾಹುತ ತಡೆಗೆ ಉನ್ನತ ಮಟ್ಟದ ಸಮಿತಿ ರಚನೆ

Date:

Advertisements

ಅಹಮದಾಬಾದ್​ ಏರ್​ ಇಂಡಿಯಾ ವಿಮಾನ ಅಪಘಾತಕ್ಕೆ ಕಾರಣ ಪರಿಶೀಲನೆಗಾಗಿ ಮತ್ತು ಭವಿಷ್ಯದಲ್ಲಿ ಇಂತಹ ಅನಾಹುತವನ್ನು ತಡೆಗೆ ಮಾರ್ಗಸೂಚಿ ರೂಪಿಸಲು ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಬಹು ಶಿಸ್ತಿನ ಸಮಿತಿ ರಚಿಸಲಾಗಿದೆ.

ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ಈ ಕುರಿತು ಮಾಹಿತಿ ನೀಡಿದ್ದು, “ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಗಟ್ಟಲು ಮತ್ತು ಅವು ಸಂಭವಿಸಿದ ಸಂದರ್ಭಗಳಲ್ಲಿ ಅವುಗಳನ್ನು ನಿರ್ವಹಿಸುವ ವಿಧಾನಕ್ಕಾಗಿ ತಂಡವು ಕೆಲವು ಶಿಷ್ಟಾಚಾರಗಳನ್ನು ರೂಪಿಸುತ್ತದೆ. ಈ ಕಾರ್ಯವನ್ನು ಪೂರ್ಣಗೊಳಿಸಲು ಸಚಿವಾಲಯ ಮೂರು ತಿಂಗಳ ಗಡುವು ನೀಡಿದೆ” ಎಂದು ತಿಳಿಸಿದೆ.

ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಜಂಟಿ ಕಾರ್ಯದರ್ಶಿ ಮಟ್ಟದ ಪ್ರತಿನಿಧಿಗಳನ್ನು ಸಮಿತಿಯು ಒಳಗೊಂಡಿರುತ್ತದೆ. ಸಂಬಂಧಿತ ಸಂಸ್ಥೆಗಳು ನಡೆಸುವ ಇತರ ವಿಚಾರಣೆಗಳಿಗೆ ಈ ಸಮಿತಿಯು ಪರ್ಯಾಯವಾಗಿರುವುದಿಲ್ಲ. ಆದರೆ, ಭವಿಷ್ಯದಲ್ಲಿ ಅಂತಹ ಘಟನೆಗಳನ್ನು ತಡೆಗಟ್ಟಲು ಮತ್ತು ನಿರ್ವಹಿಸಲು ಶಿಷ್ಠಾಚಾರಗಳನ್ನು ರೂಪಿಸುವತ್ತ ಗಮನಹರಿಸುತ್ತದೆ ಎಂದು ಸಚಿವಾಲಯ ಹೇಳಿದೆ.

Advertisements

ಅವಘಡದ ಬಗ್ಗೆ ಈಗಾಗಲೇ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ನಡೆಸುತ್ತಿದೆ. ಉನ್ನತ ಮಟ್ಟದ ಬಹು ಶಿಸ್ತಿನ ಸಮಿತಿಯು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್ ಅಧ್ಯಕ್ಷತೆಯಲ್ಲಿ ಕಾರ್ಯ ನಿರ್ವಹಿಸಲಿದೆ. ನಾಗರಿಕ ವಿಮಾನಯಾನ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಸದಸ್ಯರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪೋಕ್ಸೊ’ ಶಿಕ್ಷೆಯಿಂದ ನುಣುಚಿಕೊಳ್ಳುವ ದಾಳವಾಗದಿರಲಿ ‘ಮದುವೆ’

ಗುಜರಾತ್ ಗೃಹ ಇಲಾಖೆ, ಗುಜರಾತ್ ವಿಪತ್ತು ಪ್ರತಿಕ್ರಿಯೆ ಪ್ರಾಧಿಕಾರ, ಅಹಮದಾಬಾದ್ ಪೊಲೀಸ್ ಆಯುಕ್ತರು, ಭಾರತೀಯ ವಾಯುಪಡೆಯ ತಪಾಸಣೆ ಮತ್ತು ಸುರಕ್ಷತೆಯ ಮಹಾನಿರ್ದೇಶಕರು, ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಹಾನಿರ್ದೇಶಕರು ಸಮಿತಿಯ ಭಾಗವಾಗಿದ್ದಾರೆ. ಅಲ್ಲದೆ, ಗುಪ್ತಚರ ಬ್ಯೂರೋದ ವಿಶೇಷ ನಿರ್ದೇಶಕರು ಮತ್ತು ವಿಧಿವಿಜ್ಞಾನ ವಿಜ್ಞಾನ ಸೇವೆಗಳ ನಿರ್ದೇಶನಾಲಯದ ನಿರ್ದೇಶಕರು ಸಮಿತಿಯಲ್ಲಿ ಇರಲಿದ್ದಾರೆ.

ಜೂನ್​ 12ರಂದು ಅಹಮದಾಬಾದ್​ನಿಂದ ಲಂಡನ್​ಗೆ ತೆರಳುತ್ತಿದ್ದ ಬೋಯಿಂಗ್ 787-8 ವಿಮಾನವು ಟೇಕ್​ಆಫ್​ ಆದ ಕೆಲವೇ ಕ್ಷಣದಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ 241 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್​ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಒಟ್ಟಾರೆ 265ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X