ಕಲಬುರಗಿ | ಏಳು ತಿಂಗಳು ಕಳೆದರೂ ಬಾರದ ಬಿ.ಇಡಿ ಫಲಿತಾಂಶ : ವಿದ್ಯಾರ್ಥಿಗಳ ಪ್ರತಿಭಟನೆ

Date:

Advertisements

2024–25ನೇ ಸಾಲಿನ ಬಿ.ಇಡಿ ಅಂತಿಮ ವರ್ಷದ ನಾಲ್ಕನೇ ಸೆಮಿಸ್ಟರ್ ಫಲಿತಾಂಶಗಳನ್ನು ತಕ್ಷಣವೇ ಪ್ರಕಟಿಸಬೇಕು ಹಾಗೂ ಮೂಲ ಅಂಕಪಟ್ಟಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಇಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬಿ.ಇಡಿ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿ.ವಿ.ಯ ಕುಲಪತಿಗಳ ಕಚೇರಿ ಎದುರು ಶುಕ್ರವಾರ ಎರಡು ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಪ್ರಭಾರ ಕುಲಪತಿ ಪ್ರೊ.ಗೂರು ಶ್ರೀರಾಮುಲು ಅವರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು. ಪ್ರಭಾರ ಕುಲಸಚಿವ ಪ್ರೊ.ರಮೇಶ ಲಂಡನಕರ್ ಹಾಜರಿದ್ದರು

Advertisements

ಅಂತಿಮ ವರ್ಷದ ಬಿ.ಇಡಿ ನಾಲ್ಕನೇ ವರ್ಷದ ಸೆಮಿಸ್ಟರ್ ಪರೀಕ್ಷೆ ಬರೆದು ಏಳು ತಿಂಗಳು ಕಳೆದರೂ ಫಲಿತಾಂಶ ಪ್ರಕಟಿಸಿಲ್ಲ. ಇದರಿಂದಾಗಿ ಬಿ.ಇಡಿ ವೃತ್ತಿ ಶಿಕ್ಷಣ ಪಡೆದು ಶಿಕ್ಷಕರಾಗುವ ಆಕಾಂಕ್ಷೆಯನ್ನು ಹೊತ್ತಿರುವ ಪ್ರಶಿಕ್ಷಣಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು
ದೂರಿದರು.

1003911151

‘ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಪರೀಕ್ಷೆ ಬರೆದು ಫಲಿತಾಂಶ ಮತ್ತು ಅಂಕಪಟ್ಟಿಗಾಗಿ ಚಾತಕ ಪಕ್ಷಿಯಂತೆ ಕಾಯುವ ಸ್ಥಿತಿ ಬಂದಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ವೃತ್ತಿ ಪರೀಕ್ಷೆ ತೆಗೆದುಕೊಂಡರೂ 45 ದಿನಗಳ ಒಳಗೆ ಫಲಿತಾಂಶ ಪ್ರಕಟಿಸಬೇಕೆಂಬ ನಿಯಮವಿದೆ. ಆದರೆ, ಗುಲಬರ್ಗಾ ವಿಶ್ವವಿದ್ಯಾಲಯವು ಈ ನಿಯಮವನ್ನು ಕಡೆಗಣಿಸಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು 2024–25ನೇ ಸಾಲಿನ ನಾಲ್ಕನೇ ಮತ್ತು ಎರಡನೇ ಸೆಮಿಸ್ಟರ್ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು’ ಎಂದು ಆಗ್ರಹಿಸಿದರು.

‘ಎಲ್ಲಾ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿ ವಿತರಿಸಬೇಕು. ಘಟಿಕೋತ್ಸವ ಪ್ರಮಾಣಪತ್ರ ನೀಡಬೇಕು. ಅಕ್ರಮ ಅಂಕಪಟ್ಟಿ ನೀಡುವ ಮತ್ತು ಅಂಕಪಟ್ಟಿ ತಿದ್ದುವ ದಂಧೆಗೆ ಕಡಿವಾಣ ಹಾಕಬೇಕು. ಕರ್ತವ್ಯ ಲೋಪ ಎಸಗಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು, ಘಟಿಕೋತ್ಸವ ಪ್ರಮಾಣಪತ್ರವನ್ನೂ ಶೀಘ್ರ ನೀಡಬೇಕು’ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಬೆರಗು ಹುಟ್ಟಿಸುವ ಕಲ್ಯಾಣದ ಅನುಭವ ಮಂಟಪ : ಕಥೆಗಾರ ಮಹಾಂತೇಶ ನವಲಕಲ್

ಬಿ.ಇಡಿ ವಿದ್ಯಾರ್ಥಿಗಳ ಹೋರಾಟ ಸಮಿತಿ ಸಂಚಾಲಕ ತೇಜಸ್ ಆರ್. ಇಬ್ರಾಹಿಂಪುರ, ವಿದ್ಯಾರ್ಥಿಗಳಾದ ಪ್ರಭಾಕರ ಚಿಂಚೋಳಿ, ಗಣೇಶ ಯಾದವ್, ಜೈಭೀಮ, ಪೂಜಾ ಡೊಮನಾಳ, ಸಚಿನ್, ನಾಗೇಶ್, ಯುವ ಹೋರಾಟಗಾರರಾದ ಜಗನ್ನಾಥ ಎಚ್.ಎಸ್, ಈಶ್ವರ ಕುಂಬಾರ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X