ಶಿವಮೊಗ್ಗ | ಜೂನ್ 21,22ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ

Date:

Advertisements

ಶಿವಮೊಗ್ಗ ಜಿಲ್ಲಾ ಮಟ್ಟದ ‘ಸಂವಿಧಾನ ಓದು ಅಧ್ಯಯನ ಶಿಬಿರ’ವನ್ನು ‘ಸಂವಿಧಾನ ಓದು ಅಭಿಯಾನ-ಕರ್ನಾಟಕ’ ಮತ್ತು ಶಿವಮೊಗ್ಗ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಆಯೋಜಿಸಲಾಗಿದ್ದು, ಜೂನ್ 21 ಮತ್ತು 22, 2025 ರಂದು ಶನಿವಾರ ಮತ್ತು ಭಾನುವಾರ ಎರಡು ದಿವಸ ನಡೆಸಲು ತೀರ್ಮಾನಿಸಲಾಗಿದೆ.ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಪ್ರತಿನಿಧಿಸಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳು, ಸಾಮಾಜಿಕ-ಸಾಂಸ್ಕೃತಿಕ ಹಾಗೂ ಪ್ರಗತಿಪರ ಆಶಯಉಳ್ಳ 250 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಈ ಶಿಬಿರವನ್ನು ನ್ಯಾಯಮೂರ್ತಿ ಹೆಚ್.ಎನ್‌. ನಾಗಮೋಹನದಾಸ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಸಚಿವ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹಗಡೆ , ಸನ್ನಿಧಿ, ಪಾಲನಾ ನವೀಕರಣ ಕೇಂದ್ರದ ನಿರ್ದೇಶಕ ಫಾದ‌ರ್ ಕ್ಲಿಫರ್ಡ್ ರೋಶನ್ ಪಿಂಟೋ, ಹಿರಿಯ ವಕೀಲ ಜಿ. ಎಸ್. ನಾಗರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎರಡು ದಿನಗಳ ಕಾಲ ನಡೆಯಲಿರುವ ‘ಸಂವಿಧಾನ ಓದು ಅಧ್ಯಯನ ಶಿಬಿರ’ದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮೊದಲನೆಯ ದಿನ ಸಂವಿಧಾನದ ರಚನೆ ಮತ್ತು ಮೂಲತತ್ವಗಳ ಕುರಿತು – ಗೌ. ನ್ಯಾಯಮೂರ್ತಿ ಹೆಚ್‌. ಎನ್‌. ನಾಗಮೋಹನದಾಸ್, ಸಂವಿಧಾನ ಮತ್ತು ಸಾಮಾಜಿಕನ್ಯಾಯ – ಬಿ. ರಾಜಶೇಖರಮೂರ್ತಿ, ಸಂವಿಧಾನ ಮತ್ತು ಜಾತ್ಯಾತೀತತೆ – ಆರ್. ರಾಮಕೃಷ್ಣ, ಎರಡನೇ ದಿನ ಸಂವಿಧಾನ ಮತ್ತು ಮಹಿಳೆ – ಶಾಂತಿ ನಾಗಲಾಪುರ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಿಗ್ಗ “ರಾಜಶೇಖರ ಅವರು ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ.

Advertisements
1001750158

ಎರಡನೆಯ ದಿನ ಮಧ್ಯಾಹ್ನ 1ಕ್ಕೆ ಸಮಾರೋಪ ಮತ್ತು ಪ್ರಶಸ್ತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರೋಪ ಸಮಾರಂಭದ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು , ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್ .ಆರ್ ಬಸವರಾಜಪ್ಪ , ದಲಿತ ಸಂಘರ್ಷ ಸಮಿತಿ, ಶಿವಮೊಗ್ಗ ರಾಜ್ಯ ಸಂಚಾಲಕರ ಎಂ. ಗುರುಮೂರ್ತಿ, ಜನಶಕ್ತಿ ಸಂಘಟನೆಯ ಕೆ. ಎಲ್ ಅಶೋಕ್, ಜನಪರ ಹೋರಾಟಗಾರ ಅನಂತ ರಾಮು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹೆಚ್‌.ಎನ್.ನಾಗಮೋಹನದಾಸ್ ನಿರ್ವಹಿಸಲಿದ್ದಾರೆ. ಉಪಸ್ಥಿತರಾಗಿ ಎಲ್ಲಾ ಪ್ರಮುಖ ಸಂಘಟಕರು ಇರಲಿದ್ದಾರೆ.

ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದ ಆಸಕ್ತರು ನೊಂದಣಿ ಮಾಡಿಕೊಂಡು ಭಾಗವಹಿಸಲು ಈ ಫೋನ್ ನಂಬರ್‌ಗಳಿಗೆ .7483950580, 9448329757. ಸಂಪರ್ಕಿಸಬಹುದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X