ಬೆಳಗಾವಿ | ಅಣ್ಣನ ಕೊಲೆ ಮಾಡಿದ್ದ ಸಹೋದರನನ್ನು ಬಂಧಿಸಿದ ಪೋಲಿಸರು

Date:

Advertisements

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಪಾಶ್ಚಾಪುರದ ಬಳಿ ಇರುವ ಜಮೀನಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ಸಹೋದರನ್ನು ಪೋಲಿಸರು ಬಂಧಿಸಿದ್ದಾರೆ.

ಕುರಿಗಾಹಿಯಾಗಿದ್ದ ರಾಯಪ್ಪ ಮೇ 8ರಂದು ಕುರಿ ಮೇಯಿಸಲು ಪಾಶ್ಚಾಪುರ ಬಳಿಯ ಜಮೀನಿಗೆ ತೆರಳಿದ್ದರು. ಕುರಿಗಳು ಮನೆಗೆ ಮರಳಿದವು. ಆದರೆ, ರಾಯಪ್ಪ ಬಾರದ್ದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದರು. ಮಾರನೇ ದಿನ ಹತ್ಯೆಗೀಡಾದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದರು. ಕೆಲ ಸುಳಿವು ಆಧರಿಸಿ, ಯಮಕನಮರಡಿ ಠಾಣೆ ಪೊಲೀಸರು ತನಿಖೆ ಕೈಗೊಂಡಾಗ ಬಸವರಾಜನೇ ಕೊಲೆ ಮಾಡಿರುವುದು ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕುವೈತ್‌ನ ನ್ಯಾಷನಲ್ ಪೆಟ್ರೋಲಿಯಂ ಕಂಪನಿಯಲ್ಲಿ ವಾಲ್ ಆಪರೇಟ‌ರ್ ಆಗಿ ಕೆಲಸ ಮಾಡಿದ್ದ ಬಸವರಾಜನು ಹಟ್ಟಿಆಲೂರಿಗೆ ಮರಳಿದ್ದ. ಸದ್ಯ ಯಾವ ಕೆಲಸ ಮಾಡದೆ ಮನೆಯಲ್ಲೇ ಉಳಿದಿದ್ದ. ಇದರಿಂದ ರಾಯಪ್ಪ ಮತ್ತು ಮತ್ತೊಬ್ಬ ಸಹೋದರ ದುಂಡಪ್ಪ ಸಿಟ್ಟಾಗಿದ್ದರು. ಕೆಲಸದ ವಿಚಾರವಾಗಿಯೇ ಪರಸ್ಪರರ ಮಧ್ಯೆ ಜಗಳವಾಗುತ್ತಿತ್ತು. ಕೊಲೆ ನಡೆದ ದಿನ ಮತ್ತು ಹಿಂದಿನ ದಿನವೂ ಮನೆಯಲ್ಲಿ ಗಲಾಟೆಯಾಗಿತ್ತು. ಇದರಿಂದ ಆಕ್ರೋಶಗೊಂಡ ಬಸವರಾಜನು ಕುರಿ ಮೇಯಿಸಲು ಹೋಗಿದ್ದ ಅಣ್ಣನ ಹತ್ಯೆ ಮಾಡಿದ್ದಾನೆ’ ಎಂದರು.

Advertisements
ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

Download Eedina App Android / iOS

X