ಗುಜರಾತ್ ವಿಮಾನ ದುರಂತ | ವೈದ್ಯರು ಸೇರಿ ಒಂಬತ್ತು ಮಂದಿ ಸಾವು; ಹಾಸ್ಟೆಲ್ ತೆರವು

Date:

Advertisements

ಗುಜರಾತ್ ವಿಮಾನ ದುರಂತದಲ್ಲಿ ಹಾಸ್ಟೆಲ್‌ನಲ್ಲಿ ಊಟ ಮಾಡುತ್ತಿದ್ದ ಒಂಬತ್ತು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಾಸ್ಟೆಲ್ ತೆರವುಗೊಳಿಸಲಾಗಿದೆ. ಗುರುವಾರ ಮಧ್ಯಾಹ್ನ ಬಿಜೆ ವೈದ್ಯಕೀಯ ಕಾಲೇಜಿನ ಮೆಸ್ ಕಟ್ಟಡಕ್ಕೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದ್ದು ಐವರು ವೈದ್ಯರು ಮತ್ತು ಅವರ ಕುಟುಂಬದ ನಾಲ್ವರು ಸದಸ್ಯರು ಸಾವನ್ನಪ್ಪಿದ್ದಾರೆ.

ಈ ವಿಮಾನ ದುರಂತದ ವೇಳೆ ಅಡುಗೆಯವರು ಸೇರಿದಂತೆ 60ಕ್ಕೂ ಹೆಚ್ಚು ವೈದ್ಯರು ಮತ್ತು ಮೆಸ್ ಸಿಬ್ಬಂದಿ ಒಳಗೆ ಇದ್ದರು ಎನ್ನಲಾಗಿದೆ. ಊಟದ ಸಮಯವಾಗಿದ್ದ ಕಾರಣ ಅನೇಕ ವೈದ್ಯರು ಊಟಕ್ಕಾಗಿ ಮೆಸ್‌ಗೆ ಬಂದಿದ್ದರು. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಐವರು ಗಂಭೀರವಾಗಿದ್ದಾರೆ.

ಇದನ್ನು ಓದಿದ್ದೀರಾ? ಊಟ ಮಾಡುತ್ತಿದ್ದಾಗಲೇ ಹಾಸ್ಟೆಲ್‌ ಮೇಲೆ ಬಿದ್ದ ವಿಮಾನ; 7 ವೈದ್ಯಕೀಯ ವಿದ್ಯಾರ್ಥಿಗಳ ಸಾವು

Advertisements

ಇನ್ನು ದುರಂತದಲ್ಲಿ ಮೃತಪಟ್ಟವರಲ್ಲಿ ಸಿವಿಲ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ. ಪ್ರದೀಪ್ ಸೋಲಂಕಿ ಅವರ ಗರ್ಭಿಣಿ ಪತ್ನಿ ಕೂಡ ಸೇರಿದ್ದಾರೆ. ವಿದ್ಯಾರ್ಥಿ ಡಾ. ನೀಲಕಂಠ್ ಅವರು ತಮ್ಮನ್ನು ಭೇಟಿಯಾಗಲು ಬಂದಿದ್ದ ತಾಯಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಕಳೆದುಕೊಂಡಿದ್ದಾರೆ.

ಒಟ್ಟಾಗಿ ನಾಲ್ಕು ಕಟ್ಟಡಗಳ ಮೇಲೆ ಈ ವಿಮಾನ ಪತನ ಪರಿಣಾಮ ಬೀರಿದೆ. ಇವೆಲ್ಲವುದರ ನಡುವೆ ಇದೀಗ ಸಂಪೂರ್ಣ ಹಾಸ್ಟೆಲ್ ಅನ್ನೇ ತೆರವು ಮಾಡಬೇಕಾಗಿದೆ. ತನಿಖೆ ಪ್ರಾರಂಭಿಸುತ್ತಿದ್ದಂತೆ, ಹಾಸ್ಟೆಲ್ ಕಟ್ಟಡಗಳನ್ನು ಅಸುರಕ್ಷಿತವೆಂದು ಗುರುತಿಸಲಾಗಿದ್ದು, ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿ ಜೆ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮೀನಾಕ್ಷಿ ಪರೇಖ್, “ಸುರಕ್ಷತೆಗಾಗಿ ಸ್ಥಳಾಂತರ ಮಾಡುವುದು ಅಗತ್ಯ. ಹಾಸ್ಟೆಲ್ ಖಾಲಿ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ನಾಲ್ಕು ಕಟ್ಟಡಗಳಲ್ಲಿ ಇರುವವರನ್ನು ತೆರವು ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಯುಎನ್ ಮೆಹ್ತಾ ಹಾಸ್ಟೆಲ್, ದಂತ ಕಾಲೇಜು ಮತ್ತು ಮಿಥಿಲಾ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಗಿದೆ. ಜಿಸಿಆರ್‌ಎಸ್ ವೈದ್ಯರು ಕ್ಯಾಂಪಸ್‌ನಲ್ಲಿಯೇ ಇದ್ದಾರೆ. ವಸತಿ ಸಮಸ್ಯೆ ಆಗದಿರಲಿ ಎಂದು ನಾವು ಒಂದು ವರ್ಷಕ್ಕೆ 50 ಕೊಠಡಿಗಳನ್ನು ಬಾಡಿಗೆಗೆ ಪಡೆದಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X