ಬೀದರ್‌ | ಕೆಸರು ಗದ್ದೆಯಂತಾದ ರಸ್ತೆ; ಸಿಲುಕಿದ ವಾಹನಗಳು

Date:

Advertisements

ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ.

ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ, ಕಂಗಟಿ, ನಾರಾಯಣಖೇಡ ಹೈದರಾಬಾದ್ ಸೇರಿದಂತೆ ಹಲವು ನಗರಗಳಿಗೆ ಸಂಚರಿಸುವ ಗಡಿ ಗ್ರಾಮಗಳ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರಂತೂ ಸಂಚರಿಸುವುದು ದೊಡ್ಡ ಸಾಹಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಕೆಸರಿನ ರಸ್ತೆಯಲ್ಲಿ ಸಿಲುಕಿರುವ ಲಾರಿ

“ಚಿಂತಾಕಿ-ನಾಗನಪಲ್ಲಿ ಮಧ್ಯೆ ಹೊರವಲಯದ ವರೆಗೆ ರಸ್ತೆ ನಿರ್ಮಾಣ ಮಾಡಿದ್ದು, ನಾಗನಪಲ್ಲಿ ಹೊರವಲಯದಿಂದ ಕರ್ನಾಟಕ ಗಡಿವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಇದರಿಂದ ರಸ್ತೆ ಮಧ್ಯೆ ಮಳೆ ನೀರು ಸಂಗ್ರಹವಾಗಿದೆ. ಇಂಥ ಹದಗೆಟ್ಟ ರಸ್ತೆ ಮೇಲೆ ಮರಳು ಲಾರಿ, ಬಸ್ ಸೇರಿದಂತೆ ಬಹುತೇಕ ವಾಹನಗಳು ಸಿಲುಕಿರುವ ಘಟನೆ ಜರುಗಿದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Advertisements
ಗುಂಡಿಬಿದ್ದಿರುವ ಬೀದರ್ ರಸ್ತೆ

ಈ ಸುದ್ದಿ ಓದಿದ್ದೀರಾ? ಹದಗೆಟ್ಟ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

“ಹದಗೆಟ್ಟಿರುವ ರಸ್ತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಿತ್ಯ ಸಂಚಾರ ಮಾಡಲು ಹೈರಾಣಾಗುತ್ತಿದೆ” ಎಂದು ಔರಾದ್‌ ತಾಲೂಕಿನ ನಾಗನಪಲ್ಲಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X