ಬೆಳಗಾವಿ | ಎಂಜಿನಿಯರಿಂಗ್ ಜತೆಗೆ, ಅರ್ಥಶಾಸ್ತ್ರ, ಇತಿಹಾಸ, ಕಾನೂನುಶಾಸ್ತ್ರ ಮತ್ತಿತರ ಕೋರ್ಸ್‌ಗಳಲ್ಲೂ ಸಾಧನೆ ಮಾಡಲು ಅತ್ಯುತ್ತಮ ಅವಕಾಶಗಳಿವೆ.

Date:

Advertisements

ಬೆಳಗಾವಿ ನಗರರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಹಮ್ಮಿಕೊಂಡಿದ್ದ ಪುನಃಶ್ವೇತನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಪ್ರಭಾಕರ ಕೋರೆ ಮಾತನಾಡಿ ಪ್ರತಿಭಾವಂತ ವಿದ್ಯಾರ್ಥಿಗಳು ಎಲ್ಲ ರಂಗಗಳ ಮಿಂಚುತ್ತಾರೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ, ಆರೋಗ್ಯದ ಕಡೆ ಗಮನ ಹರಿಸಬೇಕು ವೈದ್ಯಕೀಯ, ಎಂಜಿನಿಯರಿಂಗ್ ಜತೆಗೆ, ಅರ್ಥಶಾಸ್ತ್ರ, ಇತಿಹಾಸ, ಕಾನೂನುಶಾಸ್ತ್ರ ಮತ್ತಿತರ ಕೋರ್ಸ್‌ಗಳಲ್ಲೂ ಸಾಧನೆ ಮಾಡಲು ಅತ್ಯುತ್ತಮ ಅವಕಾಶಗಳಿವೆ. ಪಾಲಕರು ತಮ್ಮ ಮಕ್ಕಳಿಗೆ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಕೊಡಿಸಬೇಕು ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.

ಉದ್ಘಾಟಿಸಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಬದುಕಿನಲ್ಲಿ ಎಲ್ಲವನ್ನೂ ಕಳೆದುಕೊಂಡಾಗ ಶಿಕ್ಷಣವೇ ಚೈತನ್ಯ ನೀಡುವ ಶಕ್ತಿಯಾಗುತ್ತದೆ. ವಿದ್ಯಾರ್ಥಿಗಳು ಸತತ ಅಧ್ಯಯನದ ಮೂಲಕ ಬದುಕು ರೂಪಿಸಿಕೊಳ್ಳಬೇಕು’ ಎಂದರು.

ರಾಜಾ ಲಖಮಗೌಡ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ವಿಜಯಕುಮಾರ ಪಾಟೀಲ ಉಪಸ್ಥಿತರಿದ್ದರು. ಪ್ರಾಚಾರ್ಯ ವಿಶ್ವನಾಥ ಕಾಮಗೋಳ ಸ್ವಾಗತಿಸಿದರು. ಎನ್.ಆರ್.ಚಮಕೇರಿ ಅತಿಥಿ ಪರಿಚಯಿಸಿದರು. ಅರುಣಕುಮಾರ ವಂದಿಸಿದರು. ಪ್ರಿಯಾಂಕ ಮತ್ತು ಸರೋಜ ನಿರೂಪಿಸಿದರು.

Advertisements
ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

Download Eedina App Android / iOS

X