ಕಾಶಿ ದೇವಾಲಯದ ನಿರ್ಬಂಧಿತ ಸ್ಥಳದಲ್ಲಿ ಕಾಣಿಸಿಕೊಂಡ ಬಿಹಾರ ಮಾಜಿ ಸಚಿವ ತೇಜ್ ಪ್ರತಾಪ್: ತನಿಖೆಗೆ ಆದೇಶ

Date:

Advertisements

ಲಾಲು ಪ್ರಸಾದ್ ಯಾದವ್ ಅವರ ಪುತ್ರ ಮತ್ತು ಬಿಹಾರದ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರು ಕಾಶಿ ದೇವಾಲಯದ ನಿರ್ಬಂಧಿತ ಸ್ಥಳದಲ್ಲಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಕಾಶಿ ವಿಶ್ವನಾಥ ದೇವಾಲಯ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ.

ಕಾಶಿ ವಿಶ್ವನಾಥ ಕಾರಿಡಾರ್‌ನೊಳಗಿನ ಪ್ರದೇಶವಾಗಿದ್ದು, ಇಲ್ಲಿ ದೇವಾಲಯದ ಆವರಣವೂ ಇದೆ. ಈ ಪ್ರದೇಶದಲ್ಲಿ ಮೊಬೈಲ್ ಫೋನ್‌ಗಳ ಬಳಕೆಯನ್ನೂ ಮಾಡುವಂತಿಲ್ಲ. ಆದರೆ ಈ ನಿರ್ಬಂಧಿತ ಪ್ರದೇಶದಲ್ಲಿ ತೇಜ್ ಪ್ರತಾಪ್ ಇರುವ ವಿಡಿಯೋ ಗುರುವಾರದಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಶಾಸಕ ತೇಜ್ ಪ್ರತಾಪ್ ಯಾದವ್ ಆಜ್ಞೆಯಂತೆ ಕುಣಿದ ಕಾನ್‌ಸ್ಟೆಬಲ್ ಅಮಾನತು

Advertisements

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಕಾಶಿ ವಿಶ್ವನಾಥ ದೇವಾಲಯದ ಸಿಇಒ ವಿಶ್ವಭೂಷಣ್ ಮಿಶ್ರಾ, “ಇತ್ತೀಚೆಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ವಿವಿಧ ಪತ್ರಿಕೆಗಳ ಮೂಲಕ ದೇವಾಲಯ ಆಡಳಿತ ಮಂಡಳಿಗೆ ಈ ವಿಡಿಯೋ ಬಗ್ಗೆ ತಿಳಿದುಬಂದಿದೆ” ಎಂದಿದ್ದಾರೆ.

ಹಾಗೆಯೇ ಈ ಬಗ್ಗೆ ದೇವಾಲಯದ ಭದ್ರತೆ ಜವಾಬ್ದಾರಿ ಹೊಂದಿರುವ ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. “ಈ ವಿಷಯದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಮತ್ತು ಸಂಬಂಧಪಟ್ಟ ಸಂಸ್ಥೆಯ ಜವಾಬ್ದಾರಿಯುತ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಮೀಸಲು ಪೊಲೀಸ್ ಪಡೆ(CRPF) ಮತ್ತು ಸ್ಥಳೀಯ ಪೊಲೀಸ್ ಆಡಳಿತಕ್ಕೆ ಮಾಹಿತಿಯನ್ನು ಕಳುಹಿಸಲಾಗಿದೆ” ಎಂದು ವಿಶ್ವಭೂಷಣ್ ಮಿಶ್ರಾ ಹೇಳಿದ್ದಾರೆ.

“ದೇವಾಲಯದ ಆವರಣದಲ್ಲಿ ನಿಗದಿತ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ನೋಡಿಕೊಳ್ಳಲು ಎರಡೂ ಸಂಸ್ಥೆಗಳನ್ನು ಕೋರಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದ ಯಾವುದೇ ಸಿಬ್ಬಂದಿಯನ್ನು ಗುರುತಿಸಲಾಗುತ್ತದೆ. ನಿಯಮಗಳ ಉಲ್ಲಂಘನೆ ಕಂಡುಬಂದರೆ, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

ಮೇ 25ರಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರು ತೇಜ್ ಪ್ರತಾಪ್ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X