ಹಾಸನ | ಏಳು ತಿಂಗಳಿಂದ ಕೈಸೇರದ ವೇತನ; ನ್ಯೂ ಮಿನರ್ವ ಮಿಲ್ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

Date:

Advertisements

ಕಳೆದ ಏಳು ತಿಂಗಳಿಂದ ಕಾರ್ಮಿಕರ ಕೈಸೇರದ ವೇತನವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಹಾಸನ ನಗರ ಸಮೀಪದ ಹನುಮಂತಪುರ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಎದುರು ಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ ಸಿ ಡೋಂಗ್ರೆ ಮಾತನಾಡಿ, “ನ್ಯೂ ಮಿನರ್ವ ಮಿಲ್ ಸಂಸ್ಥೆಯು ನ್ಯಾಷನಲ್ ಟೆಕ್ಸ್‌ಟೈಲ್ಸ್ ಕಾರ್ಪೊರೇಷನ್(ಎನ್‌ಟಿಸಿ) ಭಾಗವಾಗಿದ್ದು, ದೇಶಾದ್ಯಂತ ಈ ರೀತಿಯ 23 ಘಟಕಗಳಿವೆ. ಈ ಎಲ್ಲ ಘಟಕಗಳು ಮಾರ್ಚ್ 2020ರಿಂದ ಸ್ಥಗಿತಗೊಂಡಿವೆ. 2020ರ ಏಪ್ರಿಲ್ 1ರಿಂದ ಕಾರ್ಮಿಕರಿಗೆ ಪೂರ್ತಿ ಸಂಬಳ ನೀಡದೆ ಶೇ.50ರಷ್ಟು ಸಂಬಳ ನೀಡುತ್ತ ಬಂದಿದ್ದಾರೆ” ಎಂದು ದೂರಿದರು.

“ಬಾಕಿ ಉಳಿದಿರುವ ವೇತನವನ್ನು ನಿರ್ದಿಷ್ಟ ಸಮಯದಲ್ಲಿ ನೀಡದೆ ಯಾವಾಗಲೋ ಒಮ್ಮೊಮ್ಮೆ ನೀಡುತ್ತಿದ್ದಾರೆ. 2024ರ ನವೆಂಬರ್‌ನಿಂದ ವೇತನವನ್ನೇ ನೀಡಿಲ್ಲ. ಇದರಿಂದಾಗಿ ಕಾರ್ಮಿಕರ ಜೀವನ ಆತಂತ್ರಗೊಂಡಿದೆ. ಇದರ ಪರಿಣಾಮವಾಗಿ ಕಾರ್ಮಿಕರ ಇಎಸ್‌ಐ, ಪಿಎಫ್ ಕಂತುಗಳು ಸಂದಾಯವಾಗದೆ, ಈ ಸೌಲಭ್ಯಗಳು ಇದ್ದೂ ಇಲ್ಲದಂತಾಗಿವೆ” ಎಂದು ಕಳವಳ ವ್ಯಕ್ತಪಡಿಸಿದರು.

“ಈ ವಿಚಾರಗಳ ಕುರಿತು ಅನೇಕ ಬಾರಿ ಮ್ಯಾನೇಜ್‌ಮೆಂಟ್ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆ ಕುರಿತು ಈ ವಿಚಾರಗಳನ್ನು ಮುಂದಿಟ್ಟುಕೊಂಡು ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಮುಂದೆ ಕಾರ್ಮಿಕರು ಸೇರಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ” ಎಂದರು.

“ಸರ್ಕಾರದ ಗಮನ ಸೆಳೆದರೂ ಕೂಡ ಈವರೆಗೂ ಯಾವುದೇ ರೀತಿಯ ಸಮಸ್ಯೆ ಬಗೆಹರಿಸಿಲ್ಲ. ಮಿನರ್ವ್ ಮಿಲ್ ಬಟ್ಟೆ ಪ್ಯಾಕ್ಟರಿ ಮ್ಯಾನೇಜ್‌ಮೆಂಟ್ ಅತ್ಯಂತ ಬೇಜವಾಬ್ದಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಕೂಡಲೇ ಏಳು ತಿಂಗಳ ಸಂಬಳವನ್ನು ಕೊಡುವಂತೆ ಆಗ್ರಹಿಸಿ ಶನಿವಾರದಿಂದ ತೀವ್ರತರ ಹೋರಾಟ ಆರಂಭವಾಗಿದೆ. ನಮ್ಮ ಬೇಡಿಕೆ ಈಡೇರದಿದ್ದರೆ, ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಹೋಗಿ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ವೈಜ್ಞಾನಿಕ ಕೃಷಿ ಪದ್ಧತಿಯಿಂದ ಹೆಚ್ಚು ಇಳುವರಿ ಪಡೆಯಿರಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

Advertisements

ಕಾರ್ಮಿಕರಿಗೆ ಆಗುತ್ತಿರುವ ಈ ಅನ್ಯಾಯವನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಗಮನಕ್ಕೆ ತೆಗೆದುಕೊಂಡು ಮಧ್ಯ ಪ್ರವೇಶಿಸಬೇಕು. 2020ರ ಮಾರ್ಚ್‌ನಿಂದ ಸ್ಥಗಿತಗೊಂಡಿರುವ ಘಟಕದ ಪುನರಾರಂಭಕ್ಕೆ ಹಾಗೂ ಕಾರ್ಮಿಕರಿಗೆ ಬಾಕಿ ವೇತನ ಕೊಡಿಸುವಂತಹ ಕ್ರಮಗಳನ್ನು ಶೀಘ್ರವೇ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಬಿ ಎಂ ಮಧು, ಉಪಾಧ್ಯಕ್ಷ ಜೆ ಆರ್ ಸಂತೋಷ್, ಕಾರ್ಯದರ್ಶಿ ಹೆಚ್ ಎಸ್ ಮಂಜೇಗೌಡ, ಖಜಾಂಚಿ ಜೆ ಸಿ ಲೋಕೇಶ್ ಸೇರಿದಂತೆ ನ್ಯೂ ಮಿನರ್ವ ಮಿಲ್‌ನ ಕಾರ್ಮಿಕರು ಇದ್ದರು.

cleardot
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X