ವಿದೇಶ ಪ್ರವಾಸ ಹೊರಟ ಪ್ರಧಾನಿಗೆ ಮಣಿಪುರಕ್ಕೆ ಭೇಟಿ ನೀಡುವ ಸಹಾನುಭೂತಿಯೂ ಇಲ್ಲ: ಕಾಂಗ್ರೆಸ್ ಟೀಕೆ

Date:

Advertisements

ನಿರಂತರವಾಗಿ ವಿದೇಶ ಪ್ರವಾಸದಲ್ಲೇ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಟೀಕಿಸಿದೆ. ವಿದೇಶಕ್ಕೆ ಪ್ರವಾಸ ಹೋಗುವಷ್ಟು ಶಕ್ತಿಯಿರುವ ಪ್ರಧಾನಿಗೆ ಮಣಿಪುರಕ್ಕೆ ಭೇಟಿ ನೀಡುವ ಸಹಾನುಭೂತಿಯೂ ಇಲ್ಲ ಎಂದು ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಪೋಸ್ಟ್ ಮಾಡಿದ್ದಾರೆ. “ಪ್ರಧಾನ ಮಂತ್ರಿಗಳು ಇಂದು ಬೆಳಿಗ್ಗೆ ಸೈಪ್ರಸ್, ಕೆನಡಾ ಮತ್ತು ಕ್ರೊಯೇಷಿಯಾಕ್ಕೆ ತೆರಳಿದ್ದಾರೆ. ಈ ವಿದೇಶ ಭೇಟಿಗಳಿಗೆ ಪ್ರಧಾನಿಗೆ ಶಕ್ತಿ(energy), ಉತ್ಸಾಹ(excitement) ಮತ್ತು ಹುರುಪು(enthusiasm) ಎಂಬ ಮೂರು ‘ಇ(E)’ಗಳೂ ಇವೆ” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಭಾರೀ ವಿಶ್ವಾಸದ ಮೋದಿಯ ವಿದೇಶಿ ಸಂಬಂಧಗಳು ಕುಸಿದುಬೀಳಲಿವೆಯೇ?

Advertisements

ಜಿ 7 ಶೃಂಗಸಭೆಯು ಜೂನ್ 15ರಿಂದ 17ರವರೆಗೆ ಕೆನಡಾದಲ್ಲಿ ನಡೆಯಲ್ಲಿದ್ದು ಈ ಶೃಂಗಸಭೆಗೆ ಕೆನಡಾ ಭಾರತವನ್ನು ಆಹ್ವಾನಿಸಿಲ್ಲ. ಈ ವಿಚಾರದಲ್ಲಿಯೂ ಕಾಂಗ್ರೆಸ್ ನಾಯಕ ಪ್ರಧಾನಿಯನ್ನು ಟೀಕಿಸಿದ್ದಾರೆ. “ಭಾರತಕ್ಕೆ ಆಹ್ವಾನ ನೀಡಲು ಕೆನಡಾ ವಿಳಂಬ ಮಾಡುತ್ತಿರುವುದು ಕಂಡುಬಂದಾಗ ಮೋದಿಯವರ ಬಗ್ಗೆ ಡಂಗುರ ಸಾರುವವರೂ ಕೆನಡಾ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಹೇಳಿಕೊಂಡರು” ಎಂದು ವ್ಯಂಗ್ಯವಾಡಿದ್ದಾರೆ.

“ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆ ಆಗಿರುವುದರಿಂದ ಭಾರತವನ್ನು ಜಿ7 ಶೃಂಗಸಭೆಗೆ ಆಹ್ವಾನಿಸಲಾಗಿದೆ ಎಂದು ಕೆನಡಾದ ಪ್ರಧಾನಿ ಹೇಳಿದ್ದಾರೆ. ಆದರೆ ನೀತಿ ಆಯೋಗದ ಸಿಇಒ ಪ್ರಕಾರ 2025ರ ಮೇ 24ರಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂಬುದನ್ನು ಪ್ರಧಾನಿ ಮೋದಿ ಅವರು ಕೆನಡಾ ಪ್ರಧಾನಿಗೆ ನೆನಪಿಸಬೇಕು” ಎಂದು ಪೋಸ್ಟ್ ಮಾಡಿದ್ದಾರೆ.

“2023ರ ಮೇ ತಿಂಗಳಿನಿಂದ ಈವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 35ನೇ ಬಾರಿ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಈ ವಿದೇಶ ಪ್ರವಾಸಕ್ಕೆ ಅವರಿಗೆ ಮೂರು ‘ಇ’ಗಳಾದ ಶಕ್ತಿ(energy), ಉತ್ಸಾಹ(excitement) ಮತ್ತು ಹುರುಪು(enthusiasm) ಇರುತ್ತದೆ. ಆದರೆ ಮಣಿಪುರಕ್ಕೆ ಹೋಗಲು ನಾಲ್ಕನೇ ಈ ಸಹಾನಭೂತಿ(empathy) ಇಲ್ಲವೇ” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇದನ್ನು ಓದಿದ್ದೀರಾ? ಕೆನಡಾದಲ್ಲಿ ಜಿ 7 ಶೃಂಗಸಭೆ: ಪ್ರಧಾನಿ ನರೇಂದ್ರ ಮೋದಿಗಿಲ್ಲ ಆಹ್ವಾನ

“ಮಣಿಪುರದಲ್ಲಿ ಜನರ ಸಂಕಷ್ಟ, ನೋವು ಹಾಗೆಯೇ ಇದೆ. 2023ರ ಮೇ 3ರಿಂದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿಲ್ಲ, ಮಣಿಪುರದ ರಾಜಕೀಯ ನಾಯಕರನ್ನೂ ಭೇಟಿಯಾಗಿಲ್ಲ. ಮಣಿಪುರವನ್ನು ಈ ರೀತಿ ಭೀಕರವಾಗಿ ನಡೆಸಿಕೊಂಡ ಪ್ರಧಾನಿಯ ವರ್ತನೆ ಶೋಚನೀಯ” ಎಂದು ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡ 2015ರ ಪ್ರಧಾನಿಯವರ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X