ಬಳ್ಳಾರಿ | ಜೂ.25ರೊಳಗೆ ತುಂಗಭದ್ರಾ ಜಲಾಶಯದ ಮೂರೂ ಕಾಲುವೆಗಳಿಗೆ ನೀರು ಬಿಡಿ: ಕರೂರ್ ಮಾಧವ ರೆಡ್ಡಿ

Date:

Advertisements

ತುಂಗಾಭದ್ರಾ ಜಲಾಶಯದಲ್ಲಿ ಈ ಹಿಂದೆ ಸಂಗ್ರಹಿಸಿದಂತೆ 100 ಟಿಎಂಸಿ ನೀರನ್ನು ಸಂಗ್ರಹಿಸಲು ಸಾಧ್ಯವಿಲ್ಲ. ಕೇವಲ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹಿಸಬಹುದು. ಜಲಾಶಯದಲ್ಲಿ 25-30 ಟಿಎಂಸಿ ನೀರು ಸಂಗ್ರಹವಾದರೆ ಜೂನ್ 25ರೊಳಗೆ ಜಲಾಶಯದ ಮೂರೂ ಕಾಲುವೆಗಳಿಗೆ ನೀರನ್ನು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಆರ್  ಕರೂರು ಮಾಧವ ರೆಡ್ಡಿ ತುಂಗಭದ್ರಾ ಮಂಡಳಿಯ ಅಧ್ಯಕ್ಷರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದರು.

ನಗರದ ಮುಂಡ್ಲೂರು ರಾಮಪ್ಪ ಸಭಾಂಗಣದಲ್ಲಿ ರೈತ ಸಂಘಟನೆಗಳೊಂದಿಗೆ ಪತ್ರಿಕಾಗೋಷ್ಟಿ ನಡೆಸಿ, ರೈತರ ಸಂಕಷ್ಟಗಳ ಕುರಿತು ಜಲಾಶಯ ಮಂಡಳ ಹಾಗೂ ಅಧ್ಯಕ್ಷರಿಗೆ ಮನದಟ್ಟು ಮಾಡಿದರು.

ಮಾಧವರೆಡ್ಡಿ ಮಾತನಾಡಿ, “ತುಂಗಭದ್ರಾ ಜಲಾಶಯದ 33 ಗೇಟ್‌ಗಳು ಶಿಥಿಲಗೊಂಡಿದ್ದು, ಅದರಲ್ಲಿ ಕಳೆದ ವರ್ಷ 19ನೇ ಗೇಟ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಇದು ಸಂಬಂಧಿಸಿದ ಅಧಿಕಾರಿಗಳಿಗೆ ಗೊತ್ತಿದ್ದರೂ, ಗೇಟನ್ನು ಈವರೆಗೆ ದುರಸ್ತಿ ಮಾಡಿಲ್ಲ, ಹೊಸ ಗೇಟನ್ನೂ ಅಳವಡಿಸಿಲ್ಲ. ಜಲಾಶಯಕ್ಕೆ ಅಂದು ಅಳವಡಿಸಿದ ತಾತ್ಕಾಲಿಕ ಗೇಟ್‌ನ್ನೇ ಇಂದಿಗೂ ಉಳಿಸಿಕೊಂಡು ಹೋಗಲಾಗುತ್ತಿದೆ” ಎಂದರು.

Advertisements

“ತುಂಗಭದ್ರಾ ಜಲಾಶಯದ ಹಾಳಾಗಿರುವ ಗೇಟ್‌ಗಳನ್ನು ಬದಲಾಯಿಸುವ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆಯೆಂದು ಮಂಡಳಿಯ ಅಧ್ಯಕ್ಷ ಶಿವರಾಜ್ ತಂಗಡಿಗಿ ತಿಳಿಸಿದ್ದಾರೆ. ಟೆಂಡರ್ ಕರೆದರೂ ಕೂಡಾ ಇಂದಿಗೂ ಗೇಟ್ ಅಳವಡಿಸುವ ಕಾರ್ಯ  ಆರಂಭವಾಗಿಲ್ಲ. ಇದರಿಂದ ಜಲಾಶಯದ ಮೂರು ಕಾಲುವೆಗಳ ಮತ್ತು ನದಿ ಪಾತ್ರದ ಜನರು ಕೃಷಿ ಚಟುವಟಿಕೆ ನಡೆಸಲು ಆತಂಕಗೊಂಡಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

“5 ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಬೋರ್ಡ್‌ನ ಅಧ್ಯಕ್ಷರು ಸದಸ್ಯರುಗಳು ಸೇರಿ ಮೂರೂ ಕಾಲುವೆಗಳಿಗೆ ಯಾವಾಗ ನೀರು ಬಿಡಲಾಗುತ್ತದೆ, ಎಲ್ಲಿಯವರೆಗೆ ನೀರು ಬಿಡಲಾಗುತ್ತದೆ? ಎಂಬುದನ್ನು ಖಚಿತಪಡಿಸಬೇಕು. ಇದರಿಂದ ಮೂರು ಕಾಲುವೆಗಳ ಐದು ಜಿಲ್ಲೆಗಳ ರೈತರಿಗೆ, ನೀರು ಲಭ್ಯವಾಗುವ ಆಧಾರದ ಮೇಲೆ ಬೆಳೆಗಳನ್ನು ಬಿತ್ತಲು ಅನುಕೂಲವಾಗುತ್ತದೆ. ತುಂಗಭದ್ರಾ ಜಲಾಶಯದ ಮಂಡಳಿ ಶೀಘ್ರದಲ್ಲೇ ನೀರು ಬಿಡುವ ಮತ್ತು ಬಂದ್ ಮಾಡುವ ದಿನಾಂಕವನ್ನು ರೈತರಿಗೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಬೇಕು” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಏಳು ತಿಂಗಳಿಂದ ಕೈಸೇರದ ವೇತನ; ನ್ಯೂ ಮಿನರ್ವ ಮಿಲ್ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

“ಕಳೆದ ವರ್ಷ ಈ ಜಲಾಶಯ ಪಾತ್ರದ ರೈತರು 2 ಲಕ್ಷ ಕ್ವಿಂಟಲ್ ಒಣ ಮೆಣಸಿನಕಾಯಿ ಬೆಳೆಯನ್ನು ಬೆಳೆದಿದ್ದರು. ಆದರೀಗ ಈವರೆಗೂ ಮೆಣಸಿನಕಾಯಿ ಬೀಜವನ್ನು ಖರೀದಿಸಿರುವುದಿಲ್ಲ ಹಾಗೂ ಸಸಿಯನ್ನೂ ಹಾಕಿರುವುದಿಲ್ಲ. ಇದರಿಂದ ರೈತರು ಆತಂಕಗೊಂಡು ಮೆಕ್ಕೆಜೋಳ ಮತ್ತು ಜೋಳವನ್ನು ಬಿತ್ತುವ ಯೋಚನೆಯಲ್ಲಿದ್ದಾರೆ. ದಯವಿಟ್ಟು ಮಂಡಳಿಯ ಅಧಿಕಾರಿಗಳು ಯಾವಾಗ ಕಾಲುವೆಗಳಿಗೆ ನೀರು ಬಿಡಲಾಗುತ್ತದೆ ಹಾಗೂ ಎಲ್ಲಿವರೆಗೂ ಬಿಡಲಾಗುತ್ತದೆ” ಎಂದು ಪತ್ರಿಕಾ ಮಾಧ್ಯಮದಲ್ಲಿ ಪ್ರಕಟಿಸಲು ಒತ್ತಾಯಿಸಿದರು.

ಲೇಪಾಕ್ಷಿ ಪಂಪನಗೌಡ, ಬಸವರಾಜ ಸ್ವಾಮಿ, ಉಮಾಪತಿ ಗೌಡ, ವಿಶ್ವನಾಥ್ ಕೆ ವಿ, ತಿಮ್ಮಾರೆಡ್ಡಿ ಓಂಕಾರಪ್ಪ, ಪಂಪನಗೌಡ, ಸುರೇಂದ್ರ, ಸಂಜೀವ ರೆಡ್ಡಿ ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X