ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರನ್ನಾಗಿ ಬೀದರ್ ನಗರದ ಮನದೀಪ ಕೌರ್ ಸರದಾರ ಮನಪ್ರೀತಸಿಂಗ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ. ಜ್ಯೋತಿಪ್ರಕಾಶ ಅವರು ಜೂನ್ 12 ರಂದು ಆದೇಶಿಸಿದ್ದು, ಮುಂದಿನ 3 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನಾಮ ನಿರ್ದೇಶಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರನ್ನಾಗಿ ಎಂಟು ಮಂದಿಯನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೊ ಅಲ್ಲಿಯವರೆಗೆ ನಾಮನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

‘ವಾರ್ತಾಭಾರತಿ’ಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ, ಬೆಂಗಳೂರಿನ ಮುಹಮ್ಮದ್ ಇಸ್ಮಾಯಿಲ್, ನಿವೃತ್ತ ಐಎಎಸ್ ಅಧಿಕಾರಿ ನಿಖ್ಖತ್ ತಬಸ್ಸುಮ್ ಆಬ್ರೂ, ಕೆ.ಆರ್.ಜೋಬಿ, ಮೈಸೂರಿನ ಮಸ್ರೂರ್ ಅಹ್ಮದ್, ಹಾವೇರಿಯ ಪರಿಮಳಾ ಜೈನ್, ಬೀದರ್ನ ಮನದೀಪ್ ಕೌರ್ ಹಾಗೂ ಮೈಸೂರಿನ ಜೆಕ್ಮೇಟ್ ವಾಂಗದೂಸ್ ಜ್ಯೋತಿ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ