ಇಸ್ರೇಲ್-ಇರಾನ್ ಸಂಘರ್ಷ | ಇರಾನ್‌ನಲ್ಲಿರುವ ಭಾರತೀಯರಿಗೆ ತುರ್ತು ಸಂಪರ್ಕ ವಿವರ ಬಿಡುಗಡೆ ಮಾಡಿದ ರಾಯಭಾರ ಕಚೇರಿ

Date:

Advertisements

ಇಸ್ರೇಲ್-ಇರಾನ್ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಇರಾನ್‌ನಲ್ಲಿರುವ ಭಾರತೀಯರಿಗೆ ಎಚ್ಚರದಿಂದಿರಲು ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇರಾನ್‌ನಲ್ಲಿರುವ ಭಾರತೀಯರು ಭಯಭೀತರಾಗಬೇಡಿ, ಸರಿಯಾದ ಎಚ್ಚರಿಕೆ ವಹಿಸಿ, ಟೆಹ್ರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಎಂದು ಭಾನುವಾರ ತಿಳಿಸಿದೆ.

ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಭಾರತೀಯ ಮೂಲದವರು ಜಾಗರೂಕರಾಗಿರಲು, ಅನಗತ್ಯವಾಗಿ ಓಡಾಡದಿರಲು, ರಾಯಭಾರ ಕಚೇರಿಯ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಬರುವ ಎಲ್ಲಾ ಅಪ್‌ಡೇಟ್‌ಗಳನ್ನು ಗಮನಿಸುತ್ತಿರಲು, ಸ್ಥಳೀಯ ಅಧಿಕಾರಿಗಳು ಸೂಚಿಸಿದಂತೆ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಲು ಸಲಹೆ ನೀಡಿದೆ.

ಇದನ್ನು ಓದಿದ್ದೀರಾ? ಬೈರುತ್‌ನಲ್ಲಿ ಇಸ್ರೇಲ್ ದಾಳಿ ಬಳಿಕ ಇರಾನ್ ಕಮಾಂಡರ್ ನಾಪತ್ತೆ : ವರದಿ

Advertisements

ಈ ಬಗ್ಗೆ ರಾಯಭಾರ ಕಚೇರಿಯು ತನ್ನ ಎಕ್ಸ್‌ ಖಾತೆಯಲ್ಲಿ ಗೂಗಲ್ ಫಾರ್ಮ್ ಅನ್ನು ಒದಗಿಸಿದೆ. ಭಾರತೀಯ ನಾಗರಿಕರು ಅದನ್ನು ಭರ್ತಿ ಮಾಡಿ ತಮ್ಮ ವಿವರಗಳನ್ನು ಒದಗಿಸಬೇಕು ಎಂದು ಹೇಳಿದೆ. ಟೆಲಿಗ್ರಾಮ್ ಲಿಂಕ್ ಅನ್ನು ಸಹ ಒದಗಿಸಲಾಗಿದೆ. ” ದಯವಿಟ್ಟು ಗಮನಿಸಿ ಈ ಟೆಲಿಗ್ರಾಮ್ ಲಿಂಕ್ ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಾತ್ರ” ಎಂದೂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ತುರ್ತು ಸಂಪರ್ಕ ವಿವರಗಳನ್ನು ಸಹ ಒದಗಿಸಿದೆ.

ಸಂಪರ್ಕ ಸಂಖ್ಯೆಗಳು: ಕರೆಗೆ ಮಾತ್ರ: +98 9128109115, +98 9128109109
ವಾಟ್ಸಾಪ್ ಕರೆಗಾಗಿ: +98 901044557, +98 9015993320, +91 8086871709
ಬಂದರ್ ಅಬ್ಬಾಸ್: +98 9177699036 ಮತ್ತು ಜಹೇದನ್: +98 9396356649

ಇಸ್ರೇಲ್ ಶುಕ್ರವಾರ ಮುಂಜಾನೆ ಇರಾನ್‌ನ ಪರಮಾಣು, ಕ್ಷಿಪಣಿ ಮತ್ತು ಮಿಲಿಟರಿ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಇದಾದ ಬಳಿಕ ಇರಾನ್ ಇಸ್ರೇಲ್ ಮೇಲೆ ಪ್ರತೀಕಾರದ ದಾಳಿಗಳನ್ನು ಪ್ರಾರಂಭಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X