ಗುಜರಾತ್‌ ವಿಮಾನ ದುರಂತ: ಮೃತರ ಸಂಖ್ಯೆಯ ಬಗ್ಗೆ ಹೆಚ್ಚಿದ ಗೊಂದಲ, ಅಧಿಕಾರಿಗಳು ಮೌನ

Date:

Advertisements

ಗುಜರಾತ್ ವಿಮಾನ ದುರಂತ ನಡೆದು ನಾಲ್ಕು ದಿನ ಕಳೆದಿದ್ದು ಇನ್ನೂ ಅಧಿಕೃತ ಸಾವಿನ ಸಂಖ್ಯೆಯನ್ನು ಘೋಷಿಸಿಲ್ಲ. ಮೃತರ ಸಂಖ್ಯೆಯ ಬಗ್ಗೆ ಗೊಂದಲ ಹೆಚ್ಚಾಗುತ್ತಲೇ ಇದೆ. ಆಸ್ಪತ್ರೆಯ ವೈದ್ಯರು 270 ಶವಗಳು ಪತ್ತೆಯಾಗಿದೆ ಎಂದಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಮಾತ್ರ ಮೌನ ಕಾಯ್ದುಕೊಂಡಿದ್ದಾರೆ.

ಏರ್ ಇಂಡಿಯಾ ವಿಮಾನವು 242 ಪ್ರಯಾಣಿಕರನ್ನು ಹೊತ್ತೊಯ್ದಿದೆ. ಈ ಪೈಕಿ ವಿಶ್ವಾಸ್ ಎಂಬ ಓರ್ವ ಪ್ರಯಾಣಿಕ ಮಾತ್ರ ಬದುಕುಳಿದಿರುವುದು. ಈವರೆಗೆ ನಾಲ್ಕು ವೈದ್ಯರು ಮತ್ತು ಒಂಬತ್ತು ನಾಗರಿಕರ ಗುರುತು ದೃಢಪಟ್ಟಿದೆ. ಆದರೆ 272 ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇನ್ನೂ 18 ಜನರ ಪತ್ತೆಹಚ್ಚಲಾಗಿಲ್ಲ.

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ವೈದ್ಯರು ಸೇರಿ ಒಂಬತ್ತು ಮಂದಿ ಸಾವು; ಹಾಸ್ಟೆಲ್ ತೆರವು

Advertisements

ಗುಜರಾತ್‌ನ ಅಹಮದಾಬಾದ್‌ ವಿಮಾನ ದುರಂತದಲ್ಲಿ ಅಧಿಕೃತ ಸಾವಿನ ಸಂಖ್ಯೆಯನ್ನು ಸರ್ಕಾರ ಇನ್ನೂ ಬಹಿರಂಗಪಡಿಸಿಲ್ಲ. ಇದರಿಂದಾಗಿ ಮಾಧ್ಯಮಗಳಲ್ಲಿ ಬೇರೆ ಬೇರೆ ರೀತಿಯ ಮೃತರ ಸಂಖ್ಯೆ ಪ್ರಕಟವಾಗುತ್ತಿದೆ. ಶನಿವಾರ, ಸಿವಿಲ್ ಆಸ್ಪತ್ರೆಯ ಡಾ. ಧವಲ್ ಗಮೇಟಿ ಅವರು 270 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಧ್ಯಮಗಳಿಗೆ ಬಹಿರಂಗಪಡಿಸಿದರು. ಆದರೆ ವಿಮಾನದಲ್ಲಿದ್ದವರ ಸಂಖ್ಯೆ ಮತ್ತು ಹಾಸ್ಟೆಲ್‌ನಲ್ಲಿ ಮೃತಪಟ್ಟವರ ಸಂಖ್ಯೆಯೂ ಇದು ವ್ಯತಿರಿಕ್ತವಾಗಿದೆ.

ಬೋಯಿಂಗ್ 787-8 ಡ್ರೀಮ್‌ಲೈನರ್ 169 ಭಾರತೀಯರು, 53 ಬ್ರಿಟನ್ನರು, 7 ಪೋರ್ಚುಗೀಸ್ ಮತ್ತು 1 ಕೆನಡಿಯನ್ ಸೇರಿದಂತೆ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಅಹಮದಾಬಾದ್‌ನ ಜನನಿಬಿಡ ಪ್ರದೇಶದಲ್ಲಿ ವಿಮಾನ ಪತನಗೊಂಡಾಗ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ 270 ಶವ ಪತ್ತೆಯಾಗಿದೆ ಎಂಬುದು ಗಂಭೀರ ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ಡಾ. ಗ್ಯಾಮೆಟಿ ಅವರು ಹೇಳಿದಂತೆ 270 ಜನರ ಅಂಕಿ ಅಂಶ ನಿಖರವಾಗಿದ್ದರೂ 16 ಹೆಚ್ಚುವರಿ ಸಾವುಗಳ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟೀಕರಣವಿಲ್ಲ. ಇದು ಮತ್ತಷ್ಟು ಕಳವಳಕ್ಕೆ ಕಾರಣವಾಗಿದೆ. ಬಿ.ಜೆ. ವೈದ್ಯಕೀಯ ಕ್ಯಾಂಪಸ್‌ನೊಳಗೆ ಕೆಲವು ವೈದ್ಯರು ಮತ್ತು ಹಾಸ್ಟೆಲ್‌ನ ಕಾರ್ಮಿಕರು ನಾಪತ್ತೆಯಾಗಿರಬಹುದು ಎಂಬ ಸುದ್ದಿಯೂ ಇದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X