ಗುಬ್ಬಿ | ಯುವಶಕ್ತಿ ಜನಪರ ವೇದಿಕೆಯಿಂದ ರೋಗಿಗಳಿಗೆ ಹಾಲು ಹಣ್ಣು ವಿತರಣೆ

Date:

Advertisements

 ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ವಿಶೇಷ ಗುರುತರ ಕೆಲಸ ಮಾಡಿದ ಬಾಲಾಜಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಬಾಲಾಜಿ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಪ್ರಯುಕ್ತ ಯುವಶಕ್ತಿ ಜನಪರ ವೇದಿಕೆ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಣೆ ಮಾಡುವ ಮೂಲಕ ಸರಳ ಹಾಗೂ ಸಾಮಾಜಿಕ ಬದ್ಧತೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಯ ಒಳ ಹಾಗೂ ಹೊರ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಿಸಿದ ಕಾಂಗ್ರೆಸ್ ಮುಖಂಡ, ಜನಪರ ಯುವಶಕ್ತಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಜಿ.ಸಿ.ಶಿವಕುಮಾರ್ ಮಾತನಾಡಿ ಬಾಲಾಜಿ ಕುಮಾರ್ ಕಳೆದ 20 ವರ್ಷದಿಂದ ಗುಬ್ಬಿ ತಾಲ್ಲೂಕಿನಲ್ಲಿ ಸಮಾಜ ಸೇವಕ ಎಂದು ಗುರುತಿಸಿಕೊಂಡಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿ ವೈಶಿಷ್ಟ್ಯ ಹೊಂದಿ ತಾಲ್ಲೂಕಿನ ಹಲವು ದೇವಾಲಯಗಳ ಜೀರ್ಣೋದ್ಧಾರಕ್ಕೆ ಕೋಟಿ ಲೆಕ್ಕದಲ್ಲಿ ಹಣ ನೀಡಿದ್ದಾರೆ ಎಂದರು.

ಧಾರ್ಮಿಕ ಕ್ಷೇತ್ರ ಜೊತೆಗೆ ಸಾಮಾಜಿಕ ಸೇವೆಯಲ್ಲಿ ಸಹ ಸೈ ಎನಿಸಿಕೊಂಡು ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಘಟಕ, ಸಮವಸ್ತ್ರ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ, ಆರೋಗ್ಯ ಶಿಬಿರಗಳು, ಬಡ ರೋಗಿಗಳ ಚಿಕಿತ್ಸಾ ವೆಚ್ಚ ಹೀಗೆ ಅನೇಕ ಸಹಾಯ ಮಾಡಿ ದಾನಿಗಳು ಎಂದು ಗುರುತಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬ ಅದ್ದೂರಿ ಮಾಡದೆ ಸಾಮಾಜಿಕ ಸೇವೆಯಲ್ಲೇ ಸರಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬಾಲಾಜಿ ಕುಮಾರಣ್ಣ ಅವರಿಗೆ ಹೆಚ್ಚಿನ ಸೇವೆ ಮಾಡುವ ಶಕ್ತಿ ಸಿಗಲಿ ಎಂದು ಹಾರೈಸಿದರು.

Advertisements

ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಜಿ.ಎಲ್.ರಂಗನಾಥ್ ಮಾತನಾಡಿ ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡ ಬಾಲಾಜಿ ಕುಮಾರಣ್ಣ ತಾಲ್ಲೂಕಿನ ಜನರಿಗೆ ತಿರುಪತಿ ತಿರುಮಲ ದೇವಸ್ಥಾನದಿಂದ ದೇವರು ಕರೆತಂದು ಅದ್ದೂರಿ ಕಲ್ಯಾಣೋತ್ಸವ ಕಾರ್ಯಕ್ರಮ ಮಾಡಿ ಲಕ್ಷಾಂತರ ಭಕ್ತರಿಗೆ ಉಚಿತ ತಿಮ್ಮಪ್ಪನ ದರ್ಶನ ಮಾಡಿಸುವ ಮೂಲಕ ಜನರಿಗೆ ಪರಿಚಿತರಾಗಿ ತದನಂತರ ಬಡವರ ಪಾಲಿಗೆ ದೈವ ಸ್ವರೂಪಿಗಳಾದರು. ಮನೆ ಕಟ್ಟುವ ಬಡವರಿಗೆ ಸಿಮೆಂಟ್, ಶೀಟ್, ಬಾಗಿಲು ಕಿಟಿಕಿ, ಇಟ್ಟಿಗೆ ಹೀಗೆ ಅನೇಕ ಸಲಕರಣೆ ದಾನ ನೀಡಿದ್ದಾರೆ. ಉನ್ನತ ವ್ಯಾಸಂಗ ಮಾಡುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ, ಆರೋಗ್ಯ ಸಮಸ್ಯೆ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಪಾವತಿಸಿದ್ದಾರೆ. ಹೀಗೆ ಅನೇಕ ಸತ್ಕಾರ್ಯ ಮಾಡಿದ ಕುಮಾರಣ್ಣ ಅವರಿಗೆ ಇನ್ನೂ ಹೆಚ್ಚಿನ ಆರೋಗ್ಯ ಆಯಸ್ಸು ಸಿಗಲಿ ಎಂದು ಹಾರೈಸಿದರು.

ರೇಣುಕಪ್ಪ, ನಾರಾಯಣಸ್ವಾಮಿ, ಮಂಜುನಾಥ, ಉಮೇಶ್, ರಾಕೇಶ್, ವಸಂತಮ್ಮ, ಗಿರಿಜಮ್ಮ, ಮಂಜುಳಾ, ಸುಮಾರಾಣಿ, ಲಕ್ಕಣ್ಣ ರಂಗಸ್ವಾಮಿ, ಕೃಷ್ಣಮೂರ್ತಿ, ಜನಪರ ಯುವಶಕ್ತಿ ವೇದಿಕೆಯ ಹಲವು ಸದಸ್ಯರು, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X