ವಿಜಯಪುರ | ಭಾರೀ ಮಳೆ; ಅವಧಿಗೂ ಮುನ್ನವೇ ಅರ್ಧ ಭರ್ತಿಯಾದ ಆಲಮಟ್ಟಿ

Date:

Advertisements

ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಮೇ 19ರಿಂದಲೇ ಒಳಹರಿವು ಆರಂಭವಾಗಿತ್ತು. ಆರಂಭದಲ್ಲಿ 424 ಕ್ಯೂಸೆಕ್‌ನಿಂದ ಶುರುವಾದ ಒಳಹರಿವು ಈಗ 12,134 ಕ್ಯೂಸೆಕ್‌ಗೆ ಬಂದು ತಲುಪಿದೆ.

ಮುಂಗಾರು ಪೂರ್ವ ಮಳೆಯಿಂದ ಮೇ 24ರವರೆಗೆ ಡ್ಯಾಮ್‌ಗೆ ಸಾಧಾರಣ ಒಳಹರಿವು ಇತ್ತು. 25ರಿಂದ 29ರವರೆಗೆ 35 ಸಾವಿರದಿಂದ 60 ಸಾವಿರ ಕ್ಯೂಸೆಕ್‌ ಒಳಹರಿವು ಶುರುವಾಗಿದ್ದರಿಂದ ಮುಂಜಾಗೃತಾ ಕ್ರಮವಾಗಿ ಮೇ 29ರಂದು ಕೆಪಿಸಿಎಲ್ ಮೂಲಕ ನದಿ ಪಾತ್ರಕ್ಕೆ 10 ಸಾವಿರ ಕ್ಯೂಸೆಕ್ ನೀರು ಹರಿಬಿಡುವ ಮೂಲಕ ಪ್ರಸಕ್ತ ಸಾಲಿನಲ್ಲಿ ಪ್ರಥಮ ಬಾರಿಗೆ ಹೊರಹರಿವು ಆರಂಭಿಸಲಾಯಿತು. ಒಳಹರಿವಿನ ಪ್ರಮಾಣ ನಂತರ ದಿನಗಳಲ್ಲಿ ಇಳಿಮುಖವಾಗಿದ್ದರಿಂದ ಹೊರಹರಿವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾದ್ದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಬೆಳಿಗ್ಗೆಯಿಂದ ಮತ್ತೆ ಕೆಪಿಸಿಎಲ್ ಮೂಲಕ ನದಿ ಪಾತ್ರಕ್ಕೆ ನೀರು ಹರಿ ಬಿಡಲಾಗುತ್ತದೆ.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭಾರೀ ಮಳೆಗೆ ಗೋಡೆ ಕುಸಿತ; ವೃದ್ಧೆ ಸಾವು, ನಾಲ್ವರಿಗೆ ಗಾಯ

ಜೂನ್ ತಿಂಗಳ ಎರಡನೇ ವಾರದಲ್ಲಿ ಆಲಮಟ್ಟಿ ಜಲಾಶಯ ಅರ್ಧದಷ್ಟು ಭರ್ತಿಯಾಗಿರುವುದು ದಾಖಲೆಯಾಗಿದೆ. ಕಳೆದ ಐದಾರು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿರುವುದರ ಜತೆಗೆ ಜಲಾಶಯ ಅರ್ಧ ಭರ್ತಿಯಾಗಿದ್ದರಿಂದ ವಿಜಯಪುರ, ಬಾಗಲಕೋಟೆ, ರಾಯಚೂರ, ಯಾದಗಿರಿ, ಕಲಬುರಗಿ ಜಿಲ್ಲೆಯ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರು ಸಂತಸಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Hi,

    I wanted to see if you’d be interested in a link exchange for mutual SEO benefits. I can link to your site (eedina.com) from a few of our high-authority websites. In return, you would link back to our clients’ sites, which cover niches like health, business services, real estate, consumer electronics, and more.

    If you’re interested, let me know — I’d be happy to share more details!

    Thanks for your time,
    Karen
    SEO Account Manager

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X