ಬೆಂಗಳೂರಿನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ದೇವಾಲಯದ ಅರ್ಚಕರ ಸಹಾಯಕನ ಬಂಧನ

Date:

Advertisements

ಬೆಂಗಳೂರಿನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ದೇವಾಲಯದ ಅರ್ಚಕರ ಸಹಾಯಕನನ್ನು ಬಂಧಿಸಿರುವುದಾಗಿ ಬೆಳ್ಳಂದೂರು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬಂಧಿತ ವ್ಯಕ್ತಿ ಬಿಎ ಪದವೀಧರ, ಕೇರಳದ ತ್ರಿಶೂರಿನ ಶ್ರೀ ವಿಷ್ಣುಮಾಯ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕರ ಸಹಾಯಕ 40 ವರ್ಷದ ಅರುಣ್ ಟಿಎ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಹರಳೂರಿನ 38 ವರ್ಷದ ಸಂತ್ರಸ್ತೆ ತನ್ನ ಪತಿಯ ಮರಣದ ನಂತರ ತಾನು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕೋರಿ ದೇವಾಲಯವನ್ನು ಸಂಪರ್ಕಿಸಿದ್ದಳು. ಮಹಿಳೆಯ ಕುಟುಂಬದ ಮೇಲೆ ಯಾರೋ ಮಾಟಮಂತ್ರ ಮಾಡಿದ್ದಾರೆ ಮತ್ತು ಪರಿಸ್ಥಿತಿ ಗಂಭೀರವಾಗಿದೆ ಎಂದು ಅರುಣ್ ಈ ವೇಳೆ ಹೇಳಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಅತ್ಯಾಚಾರಕ್ಕೊಳಗಾಗಿ ಸಹಾಯಕ್ಕೆ ಅಂಗಲಾಚುವ 12ರ ಬಾಲಕಿ: ಮಧ್ಯಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಸೆರೆಯಾದ ಅಮಾನುಷ ದೃಶ್ಯ

Advertisements

ಈ ಬಗ್ಗೆ ಅಧಿಕ ವಿವರ ನೀಡಲು ಮಹಿಳೆಯ ಸಂಪರ್ಕ ವಿವರವನ್ನು ಅರುಣ್ ಪಡೆದುಕೊಂಡಿದ್ದ, ಕರೆಗಾಗಿ ಕಾಯುವಂತೆ ಹೇಳಿದ್ದ. ಆರೋಪಿ ವಿಡಿಯೋ ಕರೆ ಮಾಡಿ ತನ್ನೊಂದಿಗೆ ಅಸಭ್ಯ ಸನ್ನೆಗಳನ್ನು ಮಾಡಿದ್ದಾನೆ. ಜೊತೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಾಟಮಂತ್ರ ಮಾಡುವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ವಿಚಾರದ ಬಗ್ಗೆ ಕುಟುಂಬದೊಂದಿಗೆ ಚರ್ಚಿಸಿದ ಮಹಿಳೆ ಜೂನ್ 13ರಂದು ದೂರು ದಾಖಲಿಸಿದ್ದಾರೆ. ಪೊಲೀಸರು ಶಂಕಿತನ ವಿರುದ್ಧ ಬಿಎನ್ಎಸ್ ಸೆಕ್ಷನ್ 64(ಅತ್ಯಾಚಾರ) ಮತ್ತು 78 (ಹಿಂಬಾಲಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X