ದಾವಣಗೆರೆ | ಇಸ್ಲಾಂ ಪ್ರೀತಿಸಿದಂತೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭಾವ ಇರಬೇಕು; ಜಮಾತೆ ಇಸ್ಲಾಂ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ

Date:

Advertisements

“ಜಗತ್ತಿಗೆ ಒಬ್ಬನೆ ಸೃಷ್ಟಿಕರ್ತನಿದ್ದಾನೆ, ನಾವುಗಳು ಆತನನ್ನು ಬೇರೆ, ಬೇರೆ ಹೆಸರಿನಿಂದ ಗುರುತಿಸುತ್ತೇವೆ. ನಮ್ಮ ಧರ್ಮವನ್ನು ಪ್ರೀತಿಸಿದಂತೆಯೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭವ ಬೆಳೆಸಿಕೊಳ್ಳಬೇಕಿದೆ. ಈ ಮನೋಭಾವವು ಸಾಕಷ್ಟು ಕಲಹ, ಸಂಘರ್ಷಗಳನ್ನು ನಿವಾರಿಸುತ್ತದೆ. ವಿಭಿನ್ನ ಧರ್ಮ, ಜಾತಿ, ಪಂಥ, ವರ್ಣಗಳಿದ್ದರೂ ಜಗತ್ತಿನ ಮಾನವರೆಲ್ಲರೂ ಪರಸ್ಪರ ಸಹೋದರರೆಂದು ಇಸ್ಲಾಂಧರ್ಮ ಬೋಧಿಸುತ್ತದೆ” ಎಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಜಮಾತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಜಮಾತೆ ಇಸ್ಲಾಮಿ ಹಿಂದ್‍ನ ತಾಲ್ಲೂಕು ಘಟಕದ ಆಶ್ರಯದಲ್ಲಿ ನಗರದ ಅಲಿ ಮಸೀದಿಯಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಆಯೋಜಿಸಿದ್ದ ಈದ್ ಮಿಲನ್ ಕಾರ್ಯಕ್ರಮದಲ್ಲಿ ಅವರು ಪ್ರವಚನ ನೀಡಿದರು.

“ಸೃಷ್ಟಿಕರ್ತನು ಅನುಯಾಯಿಯೊಬ್ಬರ ತ್ಯಾಗ ಗುಣವನ್ನು ಪರೀಕ್ಷಿಸಿದ ಸಂದರ್ಭದ ಪ್ರತೀಕವಾಗಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ತ್ಯಾಗದ ಪ್ರತೀಕವಾದ ಬಕ್ರೀದ್ ಹಬ್ಬದ ನಿಜವಾದ ಆಚರಣೆ ಎಂದರೆ ತನಗೆ ಇಷ್ಟವಾದದ್ದನ್ನು ಸಂದರ್ಭ ಬಂದರೆ ತ್ಯಾಗ ಮಾಡುವುದಾಗಿದೆ” ಎಂದರು.

Advertisements

“ದೀಪಾವಳಿ, ಕ್ರಿಸ್‍ಮಸ್ ಹಬ್ಬದಲ್ಲಿ ನಾವೂ ಭಾಗವಹಿಸುತ್ತೇವೆ, ನಮ್ಮ ರಂಜಾನ್, ಬಕ್ರೀದ್ ಹಬ್ಬದಲ್ಲಿ ಇತರೆ ಧರ್ಮದವರೂ ಭಾಗವಹಿಸಿ ಸಂತಸವನ್ನು ಹಂಚಿಕೊಳ್ಳಬೇಕು. ಧರ್ಮಗಳ ಸಾರವನ್ನು ಅರಿತರೆ ಅಲ್ಲಿ ಸೌಹಾರ್ದತೆ, ಸ್ನೇಹ, ಶಾಂತಿಗೆ ಮಾತ್ರ ಅವಕಾಶ ಇರುತ್ತದೆ” ಎಂದರು.

“ಇಸ್ಲಾಮ್ ಧರ್ಮದ ಸಾರವನ್ನು ಇತರೆ ಧರ್ಮದವರಿಗೆ ತಿಳಿಸಲು, ಸೌಹಾರ್ದತೆಯನ್ನು ಮೆರೆಯಲು ಜಮಾತೆ ಇಸ್ಲಾಮಿ ಹಿಂದ್ ದೇಶದಾದ್ಯಂತ ಹಲವು ದಶಕಗಳಿಂದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆ ಮೂಲಕ ಪರಸ್ಪರರಲ್ಲಿ ಸ್ನೇಹ ಬೆಳೆಯಲು ದಾರಿಯಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಅಹಮದಾಬಾದಿನಲ್ಲಿ ನಡೆದ ವಿಮಾನದುರಂತದಲ್ಲಿ ಮಡಿದವರಿಗೆ ಎರಡು ನಿಮಿಷಗಳ ಮೌನಾಚರಣೆ ಮಾಡುವ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸರ್ಕಾರ ರೈತ, ಬಡವರ್ಗಗಳಿಗೆ ಸಾಮೂಹಿಕ ಮದುವೆ ಆಯೋಜಿಸಿ ಉಡುಗೊರೆಯಾಗಿ ಉಚಿತ ಗೃಹ ಯೋಜನೆ ಜಾರಿಗೊಳಿಸಿ

ಮಾಜಿ ಶಾಸಕ ಎಸ್.ರಾಮಪ್ಪ, ತಾಪಂ ಮಾಜಿ ಅಧ್ಯಕ್ಷ ಟಿ.ಜೆ.ಮುರುಗೇಶಪ್ಪ, ಅಂಜುಮನ್ ಸಂಸ್ಥೆ ಅಧ್ಯಕ್ಷ ಆರ್.ಸಿ.ಜಾವೀದ್, ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಶಾಮೀರ್ ಆಲಂ ಖಾನ್, ನಗರಸಭಾ ಸದಸ್ಯರಾದ ಶಂಕರ್ ಬಟಾವ್‍ಕರ್, ಕೆ.ಬಿ.ರಾಜಶೇಖರ್, ಮುಖಂಡರಾದ ಬಿ. ರೇವಣಸಿದ್ದಪ್ಪ, ಬಿ.ಮೊಹ್ಮದ್ ಸಿಗ್ಬತ್‍ಉಲ್ಲಾ, ಎಚ್.ನಿಜಗುಣ, ಸಾಹಿತಿ ಚನ್ನಬಸಪ್ಪ ಹುಲಿಕಟ್ಟಿ, ಎಂ.ಬಿ.ಅಣ್ಣಪ್ಪ, ಬಿ.ಮೊಹ್ಮದ್ ಫೈರೋಜ್, ಜಾನಪದಕಲಾವಿದ ಪರಮೇಶ್ವರಪ್ಪ ಕತ್ತಿಗೆ, ಎಂ.ಆರ್.ಸೈಯದ್ ಸನಾಉಲ್ಲಾ, ಎಚ್.ನಿಜಗುಣ, ಮಕ್ಕಳ ತಜ್ಞ ವೈದ್ಯ ಗುಲಾಂನಬಿ, ಜಮಾತೆಇಸ್ಲಾಮಿ ಹಿಂದ್ ಹರಿಹರ ಘಟಕ ಅಧ್ಯಕ್ಷ ಅಬ್ದುಲ್ ಖಯೂಂ ಎಕ್ಕೆಗೊಂದಿ, ಪತ್ರಕರ್ತ ಬಿ.ಮಗ್ದುಮ್ ಸಾಬ್ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X