ವಿಮಾನ ದುರಂತ | ನಾವು ಬಿಜೆಪಿ, ಜೆಡಿಎಸ್ ಥರ ನೀಚ ರಾಜಕೀಯ ಮಾಡಲ್ಲ: ಡಿಸಿಎಂ ಡಿ ಕೆ ಶಿವಕುಮಾರ್‌ ಕಿಡಿ

Date:

Advertisements

ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹರಿಹಾಯ್ದರು.

ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, “ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ” ಎಂದರು.

“ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ” ಎಂದು ಮಾಹಿತಿ ನೀಡಿದರು.

Advertisements

ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ” ಎಂದು ತಿಳಿಸಿದರು.

ರಾಜ್ಯ ಸರ್ಕಾರ ವಸೂಲಿ ಮಾಡುತ್ತಿರುವ ತೆರಿಗೆ ನೋಡಿದರೆ ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X