ಏಕದಿನ ವಿಶ್ವಕಪ್ ಟ್ರೋಫಿಯೊಂದಿಗೆ ಕಾಣಿಸಿಕೊಂಡ ನಟ ಶಾರುಖ್ ಖಾನ್

Date:

Advertisements
  • ವಿಶ್ವಕಪ್​ ಪ್ರಚಾರ ವಿಡಿಯೋದಲ್ಲಿ ಕಾಣಿಸಿಕೊಂಡ ​ ‘ಕಿಂಗ್‌ ಖಾನ್’
  • ಅಕ್ಟೋಬರ್​ 5ರಂದು ಭಾರತದಲ್ಲಿ ಆರಂಭಗೊಳ್ಳಲಿರುವ ಏಕದಿನ ವಿಶ್ವಕಪ್

ಬಾಲಿವುಡ್‌ನಲ್ಲಿ​ ‘ಕಿಂಗ್‌ ಖಾನ್’ ಎಂದೇ ಗುರುತಿಸಿಕೊಂಡಿರುವ ಶಾರುಖ್​ ಖಾನ್, ಭಾರತದಲ್ಲಿ ಅಕ್ಟೋಬರ್​-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಟೂರ್ನಿಯ ಪ್ರಚಾರ ರಾಯಭಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.

ಐಸಿಸಿ ಗುರುವಾರ ಬಿಡುಗಡೆ ಮಾಡಿರುವ 2 ನಿಮಿಷ, 13 ಸೆಕೆಂಡ್​ಗಳ ವಿಶ್ವಕಪ್​ ಪ್ರಚಾರ ವಿಡಿಯೋದಲ್ಲಿ ಶಾರುಖ್​ ಖಾನ್​ ಕಾಣಿಸಿಕೊಂಡಿದ್ದು, ಟ್ರೋಫಿಯೊಂದಿಗೂ ಫೋಸ್‌ ಕೊಟ್ಟಿದ್ದಾರೆ.

1975ರಿಂದ ನಡೆದಿರುವ ಏಕದಿನ ವಿಶ್ವಕಪ್​ ಟೂರ್ನಿಗಳ ಪ್ರಮುಖ ಕ್ಷಣಗಳ ಝಲಕ್​ ಒಳಗೊಂಡ ಐಸಿಸಿಯ ವಿಡಿಯೋಗೆ ಶಾರುಖ್​ ಖಾನ್​ ಹಿನ್ನೆಲೆ ಧ್ವನಿಯನ್ನೂ ನೀಡಿದ್ದಾರೆ. ಕ್ರಿಕೆಟ್ ಹಾಗೂ ಸಿನಿಮಾ ಅಭಿಮಾನಿಗಳಲ್ಲಿ ಕುತೂಹಲ ಉಂಟು ಮಾಡಿದ್ದರೆ, ಕೆಲವರು ಕ್ರಿಕೆಟ್‌ನ ಪ್ರಚಾರದಲ್ಲಿ ನಟನೇ? ಎಂದು ವ್ಯಂಗ್ಯವಾಡಿದ್ದಾರೆ.

Advertisements

ವಿಶ್ವಕಪ್​ ಪ್ರಚಾರ ವಿಡಿಯೋದಲ್ಲಿ ಕ್ರಿಕೆಟಿಗರಾದ ದಿನೇಶ್​ ಕಾರ್ತಿಕ್​, ಜಾಂಟಿ ರೋಡ್ಸ್​, ಮುತ್ತಯ್ಯ ಮುರಳೀಧರನ್​ ಮತ್ತು ಶುಭಮಾನ್​ ಗಿಲ್​ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ವಿಡಿಯೋವನ್ನು 52 ಲಕ್ಷ ಮಂದಿ ವೀಕ್ಷಿಸಿದ್ದಾರೆ.

ಅಕ್ಟೋಬರ್​ 5ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ಹಾಲಿ ರನ್ನರ್​ಅಪ್​ ನ್ಯೂಜಿಲೆಂಡ್​ ನಡುವಿನ ಪಂದ್ಯದೊಂದಿಗೆ ಏಕದಿನ ವಿಶ್ವಕಪ್​ ಟೂರ್ನಿಗೆ ಚಾಲನೆ ಸಿಗಲಿದೆ.

ಆತಿಥೇಯ ಭಾರತ ತಂಡ ಅಕ್ಟೋಬರ್​ 8ರಂದು ಚೆನ್ನೈನಲ್ಲಿ 5 ಬಾರಿಯ ವಿಶ್ವ ಚಾಂಪಿಯನ್​ ಆಸ್ಟ್ರೆಲಿಯಾ ತಂಡವನ್ನು ಎದುರಿಸುವ ಮೂಲಕ ಅಭಿಯಾನ ಆರಂಭಿಸಲಿದೆ.

ಒಟ್ಟು 48 ಪಂದ್ಯಗಳನ್ನು ಒಳಗೊಂಡ ಟೂರ್ನಿಯ ಪಂದ್ಯಗಳು ದೇಶದ 10 ತಾಣಗಳಲ್ಲಿ ನಡೆಯಲಿವೆ. ನವೆಂಬರ್​ 19ರಂದು ಅಹಮದಾಬಾದ್​ನಲ್ಲಿ ಫೈನಲ್​ ಪಂದ್ಯ ನಿಗದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಣಮ್ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಸೆ.12ಕ್ಕೆ ತೆರೆಗೆ

ಪುರಾತನ ಫಿಲಂಸ್ ನಿರ್ಮಾಣದ ಶ್ರೀಕಾಂತ್ ಹುಣಸೂರು ನಿರ್ದೇಶನದ ಡೈನಮಿಕ್ ಹೀರೊ ದೇವರಾಜ್...

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ನಿಧನ

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ಅವರು ಆಗಸ್ಟ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

ಕೇರಳ | ಟ್ರಕ್‌ಗೆ ಕಾರು ಡಿಕ್ಕಿ; ಮಲಯಾಳಂ ನಟನಿಗೆ ಗಾಯ

ಮಲಯಾಳಂ ನಟ ಬಿಜು ಕುಟ್ಟನ್‌ ಅವರು ಇಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ...

Download Eedina App Android / iOS

X