ಗುಬ್ಬಿ | ಹೇಮಾವತಿ ಹೋರಾಟ : ಜೈಲು ಸೇರಿ ಹೊರಬಂದವರಿಗೆ ಸನ್ಮಾನ

Date:

Advertisements

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆದ ಬೃಹತ್ ರೈತ ಹೋರಾಟದಲ್ಲಿ ಪಾಲ್ಗೊಂಡು ನೀರಿಗಾಗಿ ಜೀವ ಕೊಡಲು ಸಿದ್ದರಿದ್ದ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ಜೈಲು ಸೇರಿದ್ದರು. ಕೆಲ ದಿನಗಳ ಸೆರೆಮನೆ ವಾಸ ಅನುಭವಿಸಿ ಹೊರ ಬಂದ ನಾಲ್ವರು ಹೋರಾಟಗಾರರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮ ನಾಗರೀಕರು ಆಯೋಜಿಸಿದರು.

ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ನಡೆದ ಕಾರ್ಯಕ್ರಮದಲ್ಲಿ ಹೇಮಾವತಿ ನೀರಿಗಾಗಿ ಹೋರಾಟ ನಡೆಸಿ ಜೈಲು ಸೇರಿ ಹೊರ ಬಂದ ಆನಂದ್, ಶರತ್, ಲೋಕೇಶ್, ಚೇತನ್ ಈ ಹೋರಾಟಗಾರರಿಗೆ ಹಾಗೂ ಇವರ ಪರ ಕಾನೂನು ಹೋರಾಟ ನಡೆಸಿದ ವಕೀಲ ಎಂ.ಡಿ.ಸುರೇಶ್ ಇವರಿಗೆ ನಾಗರೀಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಹೇಮಾವತಿ ನೀರಿಗಾಗಿ ಸಾವಿರಾರು ರೈತರು ಹೋರಾಟಕ್ಕೆ ಧುಮುಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದರು. ನಮ್ಮ ನೀರು ನಮ್ಮ ಹಕ್ಕು ಪ್ರತಿಪಾದಿಸುವ ಹೋರಾಟ ಹತ್ತಿಕ್ಕುವ ಕೆಲಸ ಪೊಲೀಸರನ್ನು ಬಳಸಿ ಸರ್ಕಾರ ಆಡಳಿತ ಅಧಿಕಾರ ದುರ್ಬಳಕೆ ಮಾಡಿತ್ತು. ಇದನ್ನು ಸಹಿಸದ ರೈತರು ಕೆಲ ಕಾಲ ಆಕ್ರೋಶ ಹೊರ ಹಾಕಿದ ಸಮಯ ಹೇಮಾವತಿ ಹೋರಾಟಗಾರರ ವಿರುದ್ಧ ಕೇಸು ದಾಖಲಿಸಿ ಕೆಲವರನ್ನು ಜೈಲಿಗೆ ಕಳಿಸಲಾಗಿತ್ತು. ಯಾವುದೇ ಅಪರಾಧ ಕೃತ್ಯ ಮಾಡದೆ ನಮ್ಮ ಜನರ ನೀರು ಉಳಿಸಲು ಜೈಲಿಗೆ ಹೋದ ಹಿನ್ನಲೆ ನಾಗರೀಕರಿಂದ ಸನ್ಮಾನ ಆಯೋಜಿಸಲಾಗಿತ್ತು.

Advertisements

ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ, ಮುಖಂಡರಾದ ಎಸ್.ಡಿ.ದಿಲೀಪ್ ಕುಮಾರ್, ಪಿ.ಬಿ.ಚಂದ್ರಶೇಖರ್ ಬಾಬು, ಸಿ.ಆರ್.ಶಂಕರಕುಮಾರ್, ಪಪಂ ಸದಸ್ಯರಾದ ಶಿವಕುಮಾರ್, ಕೃಷ್ಣಮೂರ್ತಿ, ಪಂಚಾಕ್ಷರಿ, ಯತೀಶ್, ಸಿದ್ದರಾಮಯ್ಯ, ಪ್ರಮೋದ್, ಅಖಿಲೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X