ರಾಯಚೂರು | ಕಳಪೆ ಕಾಮಗಾರಿ ; ಲೈಸನ್ಸ್ ರದ್ದತಿಗೆ ಆಗ್ರಹ

Date:

Advertisements

ಕರ್ನಾಟಕ ರಾಜ್ಯ ಸರಕಾರದ ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಯೋಜನೆಯಡಿ ಯಲ್ಲಿ 34 ಕೋಟಿ ರೂ. ವೆಚ್ಚದಲ್ಲಿ ಪವರ ಗ್ರೀಡ್‌ನಿಂದ ಯರಮರಸ್ ಕ್ಯಾಂಪ್‌ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳಪೆ ಮಾಡಿದ್ದು ಪರಿಶೀಲನೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸೇನೆ ವತಿಯಿಂದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಹದೆಗಟ್ಟಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿವೆ.34 ಕೋಟಿ ರೂ.ವೆಚ್ಚದಲ್ಲಿ ಪವರ ಗ್ರೀಡ್‌ನಿಂದ ಯರಮರಸ್ ಕ್ಯಾಂಪ್‌ವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡಲು 1 ಕಿ.ಮೀ ಗೆ 7 ಕೋಟಿ ರೂಪಾಯಿ ಅನುದಾನವನ್ನು ನೀಡಿ ಉನ್ನತ ಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ಗುತ್ತೇದಾರರಿಗೆ ಆದೇಶಿಸಿ ಸಂಪೂರ್ಣವಾಗಿ ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಸ್ಯಾಪ್‌ಕಾನ್ ಕನ್ಸ್ಟ್ರಕ್ಷನ್ ಪ್ರೈ.ಲಿ ಕಂಪನಿಗೆ ನೀಡಿದೆ. ಕಂಪನಿಯು ಕಳಪೆ ಕಾಮಗಾರಿ ಮಾಡುತ್ತಿದ್ದು ,ಅಧಿಕಾರಿಗಳೊಂದಿಗೆ ಶಾಮೀಲಾಗಿ ಭ್ರಷ್ಟಚಾರವೆಸಗಿದೆ. ಕಳಪೆ ಕಾಮಗಾರಿ ಕಾನೂನು ಬಾಹೀರವಾಗಿ ಸರಕಾರದ ಆದೇಶಗಳನ್ನು ಗಾಳಿಗೆ ತೂರಿದೆ ಎಂದು ದೂರಿದರು.

ಈ ಗುತ್ತಿಗೆದಾರನ ಅವೈಜ್ಞಾನಿಕ ಕಾಮಗಾರಿಯ ರಾಷ್ಟ್ರೀಯ ಹೆದ್ದಾರಿ ಪವರಗ್ರೀಡ್ ಮುಂದುಗಡೆ ಕಾಮಗಾರಿಯ ಗುಂಡಿಯಲ್ಲಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.ಕೂಡಲೇ ಸ್ಯಾಪ್‌ಕಾನ್ ಕನ್ಸ್ಟ್ರಕ್ಷನ್ ಪ್ರೈ.ಲಿ ಕಂಪನಿಯ ಮಾಲೀಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುಣಮಟ್ಟದಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ; ಆರೋಪಿ ಬಂಧನ

ಈ ಸಂದರ್ಭದಲ್ಲಿ ರಾಜ್ಯ ಸಂಘಟನೆ ಕಾರ್ಯದರ್ಶಿ ಜಾವಿದ್ ಖಾನ್, ಜಿಲ್ಲಾಧ್ಯಕ್ಷ ಮಾರುತಿ ಛಲುವಾದಿ ಚಿಕ್ಕಸೂಗುರು, ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X