ಬೆಂಗಳೂರು | ಬಿಬಿಎಂಪಿಯ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ಹೂಡಿ: ಆಪ್ ಆಗ್ರಹ

Date:

Advertisements

ಬೆಂಗಳೂರು ನಗರದ ಶ್ರೀನಗರದಲ್ಲಿ ಮರದ ಕೊಂಬೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿರುವ ಯುವಕ ಅಕ್ಷಯ್‌ನನ್ನು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರುಗಳೊಂದಿಗೆ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಭೇಟಿ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೂಡಲೇ ಈ ದುರ್ಘಟನೆಗೆ ಕಾರಣವಾಗಿರುವ ಬಿಬಿಎಂಪಿಯ ಅರಣ್ಯ ವಿಭಾಗದ ಉನ್ನತ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಪಕ್ಷದ ಬೆಂಗಳೂರಿನ ಕಾರ್ಯಕರ್ತರುಗಳು ಅನೇಕ ಬಾರಿ ಹಳೆಯ ಮರಗಳು ಹಾಗೂ ಕೊಂಬೆಗಳನ್ನು ತೆಗೆಯಲು ಅನೇಕ ವರ್ಷಗಳಿಂದ ದೂರನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲು ಬಿಬಿಎಂಪಿಯ ಅರಣ್ಯ ವಲಯದ ಅಧಿಕಾರಿಗಳು ಮುಂದಾಗುತ್ತಿಲ್ಲ. ಇವರುಗಳ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಅಕ್ಷಯ್‌ನಂತಹ ನೂರಾರು ಬೆಂಗಳೂರಿನ ನಾಗರಿಕರುಗಳ ಪ್ರಾಣಕ್ಕೆ ಸಂಚಕಾರ ಬಂದಿದೆ. ಅಧಿಕಾರಿಗಳು ಇಂತಹ ಅನೇಕ ದುರ್ಘಟನೆಗಳು ಪದೇಪದೇ ಸಂಭವಿಸಿದ್ದರೂ ಸಹ ಎಚ್ಚೆತ್ತುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ.

Advertisements

ಇದನ್ನು ಓದಿದ್ದೀರಾ? ಕಾಲ್ತುಳಿತದ ಹಿಂದೆ ಬಿಜೆಪಿ ಷಡ್ಯಂತ್ರ: ನ್ಯಾ.ಜಾನ್ ಮೈಕೆಲ್ ಕುನ್ಹಾ ಆಯೋಗಕ್ಕೆ ಕಾಂಗ್ರೆಸ್‌ ನಿಯೋಗದಿಂದ ದೂರು

ಸರ್ಕಾರವು ಅಧಿಕಾರಿಗಳ ಉತ್ತರದಾಯಿತ್ವವನ್ನು ನಿಜಕ್ಕೂ ಪ್ರಶ್ನಿಸುವ ತಾಕತ್ತನ್ನು ಹೊಂದಿದ್ದಲ್ಲಿ ಕೂಡಲೇ ಈ ವಿಭಾಗದ ಉನ್ನತ ಅಧಿಕಾರಿಗಳನ್ನು ಅಮಾನತು ಮಾಡಿ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಿ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಸೀತಾರಾಮ್ ಗುಂಡಪ್ಪ ಆಗ್ರಹಿಸಿದರು.

ಪಕ್ಷದ ಮುಖಂಡರುಗಳಾದ ಸರವಣ, ಇರ್ತಾದ್, ವೀಣಾ ಸರಾವ್, ಮಣಿಕಂಠ ಸೇರಿದಂತೆ ಅನೇಕ ಮುಖಂಡರುಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X