ಪೊಲೀಸರು ಕಾನೂನು ಸುವ್ಯವಸ್ಥೆಯ ಪಾಲನೆಯ ಹೊಣೆ ಹೊತ್ತ ಸರ್ಕಾರದ ಕೈಕಾಲುಗಳು, ನ್ಯಾಯವ್ಯವಸ್ಥೆ ಅನಿವಾರ್ಯ ಅಂಗ. ದುಷ್ಟ ಶಿಕ್ಷಣೆ ಶಿಷ್ಟ ರಕ್ಷಣೆ ಪೊಲೀಸರ ಕರ್ತವ್ಯವಾಗಲಿ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದರು.
ಅವರು ಸೋಮವಾರ ಅಂಬೇಡ್ಕರ್ ಯುವಸೇನೆಯ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಧಿಕಾರಿ ಹರಿರಾಂ ಶಂಕರ್ನ್ನು ಸ್ವಾಗತಿಸಿ ಮಾತನಾಡುತ್ತಾ, ಜಿಲ್ಲೆಯಲ್ಲಿ ದಲಿತ ದೌರ್ಜನ್ಯ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ, ದಲಿತರ ಮೇಲೆ ದಬ್ಬಾಳಿಕೆ ಮಾಡುವವರ ಕೈಯಲ್ಲಿ ರಾಜಕೀಯ ಅಧಿಕಾರವಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸದೆ ಜಾಮೀನು ಪಡೆಯುವಲ್ಲಿ ತನಿಖಾಧಿಕಾರಿಗಳೇ ಸಹಕರಿಸುತ್ತಿರುವುದು ಕಾರಣವಾಗಿದೆ ಎಂದ ಅವರು ದೌರ್ಜನ್ಯಕ್ಕೆ ಒಳಗಾದ ದಲಿತ ಹೆಣ್ಣು ಮಕ್ಕಳ ಹೆಸರನ್ನು ಮಾಧ್ಯಮದಲ್ಲಿ ಪ್ರಕಟಿಸದಂತೆ ಮನವಿಮಾಡಿದರು.
ನಿಯೋಗದಲ್ಲಿ ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ, ಕೃಷ್ಣ ಬಂಗೇರ ಪಡುಬಿದ್ರಿ, ಹರೀಶ್ ಸಲ್ಯಾನ್, ವಸಂತ ಪಾದೆಬೆಟ್ಟು, ಸಂಜೀವ ಬಳ್ಕೂರ್, ರವಿರಾಜ್, ಸುಜೀತ್ ಕಂಚಿನಡ್ಕ, ದಯಾಕರ್ ಮಲ್ಪೆ, ಸುಶೀಲ್ ಕೊಡವೂರು, ಸಾಧು ಚಿಟ್ಪಾಡಿ, ಅರುಣ್ ಸಲ್ಯಾನ್, ಭಗವಾನ್ ಮಲ್ಪೆ, ಸಂತೋಷ್ ಕಪ್ಪೆಟ್ಟು, ದೀಪಕ್ ಕೊಡವೂರು ಮುಂತಾದವರು ಉಪಸ್ಥಿತರಿದ್ದರು.