ಬೀದರ್‌ | ಆನ್‍ಲೈನ್ ಗೇಮಿಂಗ್ ನಿಷೇಧಕ್ಕೆ ನಮ್ಮ ಕರ್ನಾಟಕ ಸೇನೆ ಒತ್ತಾಯ

Date:

Advertisements

ರಾಜ್ಯದಲ್ಲಿ ಆನ್‍ಲೈನ್ ಗೇಮಿಂಗ್, ಬೆಟ್ಟಿಂಗ್, ಜೂಜು ಹಾಗೂ ಇತರ ಆಟಗಳನ್ನು ನಿಷೇಧಿಸುವವರೆಗೆ ನಮ್ಮ ಕರ್ನಾಟಕ ಸೇನೆ ನಿರಂತರ ಹೋರಾಟ ನಡೆಸಲಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಹೇಳಿದರು.

ಬೀದರ್ ನಗರದಲ್ಲಿ ನಡೆದ ಸೇನೆಯ ಜಿಲ್ಲಾ ರೈತ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು.

ʼಆನ್‍ಲೈನ್ ಜೂಜು ಹಾಗೂ ಬೆಟ್ಟಿಂಗ್‍ನಿಂದಾಗಿ ರಾಜ್ಯ ಹಲವು ಜಿಲ್ಲೆಯಗಳಲ್ಲಿ ಅನೇಕ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಬೀದರ್‌ ಜಿಲ್ಲೆಯಲ್ಲಿ ಕೆಲ ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದ ಬಹಳಷ್ಟು ಕುಟುಂಬಗಳು ಬೀದಿಗೆ ಬಂದಿವೆ. ಕಾರಣ, ಸರ್ಕಾರ ಆನ್‍ಲೈನ್ ಗೇಮ್‍ಗಳನ್ನು ನಿಷೇಧಿಸಬೇಕುʼ ಎಂದು ಒತ್ತಾಯಿಸಿದರು. 

Advertisements

‌ನಮ್ಮ ಕರ್ನಾಟಕ ಸೇನೆಗೆ ಆಯ್ಕೆ :

ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕ ಹಾಗೂ ಜಿಲ್ಲಾ ರೈತ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಘಟಕಕ್ಕೆ ದತ್ತಾತ್ರೇಯ ಅಲಂಕೇರೆ, ಶಶಿಕುಮಾರ ಅಷ್ಟೂರೆ (ಉಪಾಧ್ಯಕ್ಷರು) ಮತ್ತು ಸಂತೋಷ್ ಮಳಚಾಪುರೆ (ಖಜಾಂಚಿ),
ಜಿಲ್ಲಾ ರೈತ ಘಟಕಕ್ಕೆ ರಾಜಕುಮಾರ ಸ್ವಾಮಿ (ಅಧ್ಯಕ್ಷ) ಹಾಗೂ ಹುಮನಾಬಾದ್ ತಾಲ್ಲೂಕು ಘಟಕಕ್ಕೆ ಸಚಿನ್ ತಿಬಶೆಟ್ಟೆ (ಅಧ್ಯಕ್ಷ) ಅವರನ್ನು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಯಿತು.

ಇದನ್ನೂ ಓದಿ : ಕಲಬುರಗಿ | ಮನೆಯ ಛಾವಣಿ ಕುಸಿದು 11 ವರ್ಷದ ಬಾಲಕ ಸಾವು

ಸಭೆಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಸಂಚಾಲಕ ಸುಧಾಕರ ರಾಠೋಡ್, ನಗರ ಘಟಕದ ಅಧ್ಯಕ್ಷ ಸಂತೋಷ್, ಪಾಟೀಲ್, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಕಾರಬಾರಿ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಬಾಲಾಜಿ ದಾಮಾ ಮತ್ತಿತರರು ಇದ್ದರು.

ನಿಮ್ಮ ಊರು, ಸಮುದಾಯದ ಕುಂದು-ಕೊರತೆಗಳನ್ನು ʼಈದಿನ ಸಹಾಯವಾಣಿʼ ನಂಬರ್‌ಗೆ ವಾಟ್ಸಪ್‌ ಮಾಡಿ : 9035053805

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X