ಏರ್ ಇಂಡಿಯಾ ಬೋಯಿಂಗ್ 787 ವಿಮಾನಗಳಲ್ಲಿ ಗಂಭೀರ ದೋಷಗಳಿಲ್ಲ: ವಾಯುಯಾನ ಸಂಸ್ಥೆ

Date:

Advertisements

ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನಗಳಲ್ಲಿ ಯಾವುದೇ ಗಂಭೀರ ದೋಷಗಳು ಕಂಡುಬಂದಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಮಂಗಳವಾರ ತಿಳಿಸಿದೆ. ಗುಜರಾತ್ ವಿಮಾನ ದುರಂತದ ಬಳಿಕ ಬೋಯಿಂಗ್ 787 ದೋಷಗಳ ಬಗ್ಗೆ ಕಳವಳ ಉಂಟಾಗಿದೆ. ಈ ನಿಟ್ಟಿನಲ್ಲಿ ವಾಯುಯಾನ ಸಂಸ್ಥೆ ಬೋಯಿಂಗ್ 787 ವಿಮಾನಗಳ ಪರಿಶೀಲನೆ ಮಾಡಿದೆ.

ಪರಿಶೀಲನೆ ಬಳಿಕ ದೇಶೀಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿ 1,000ಕ್ಕೂ ಹೆಚ್ಚು ದೈನಂದಿನ ವಿಮಾನಗಳನ್ನು ನಿರ್ವಹಿಸುವ ಏರ್ ಇಂಡಿಯಾ ಲಿಮಿಟೆಡ್ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಹಿರಿಯ ಅಧಿಕಾರಿಗಳೊಂದಿಗೆ ಡಿಜಿಸಿಎ ಉನ್ನತ ಮಟ್ಟದ ಸಭೆಯನ್ನು ನಡೆಸಿದೆ. ಬಳಿಕ ಬೋಯಿಂಗ್‌ 787 ವಿಮಾನದಲ್ಲಿ ಗಂಭೀರ ಸಮಸ್ಯೆಗಳಿಲ್ಲ ಎಂದು ಹೇಳಿಕೆ ನೀಡಿದೆ.

ಇದನ್ನು ಓದಿದ್ದೀರಾ? ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ನಿಗೂಢ ಸಾವು; ಮತ್ತೆ ಮುನ್ನೆಲೆಗೆ

Advertisements

ಜೂನ್ 12ರಂದು ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ AI 171 ಬೋಯಿಂಗ್ 787-8 ಬೋಯಿಂಗ್ ವಿಮಾನ ಅಪಘಾತಗೊಂಡಿದ್ದು, 270ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದಾದ ಬಳಿಕ ಈ ವಿಮಾಗಳಲ್ಲಿ ಈ ಹಿಂದೆಯೂ ಕಂಡುಬಂದಿದ್ದ ದೋಷಗಳ ಬಗ್ಗೆ ಚರ್ಚೆ ಹೆಚ್ಚಾಗಿದೆ.

ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ಜಾನ್ ಬರ್ನೆಟ್ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ಕೂಡಾ ಮುನ್ನೆಲೆಗೆ ಬಂದಿದೆ. ಇವೆಲ್ಲವುದರ ನಡುವೆ ಟಾಟಾ ಒಡೆತನದ ಏರ್‌ ಇಂಡಿಯಾದ ಎಲ್ಲಾ ಬೋಯಿಂಗ್ 787 ವಿಮಾನಗಳ ಪರಿಶೀಲನೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ಏರ್ ಇಂಡಿಯಾ ವಿಮಾನ ರದ್ದು

ಈ ನಡುವೆ ಮಂಗಳವಾರ ಏರ್‌ ಇಂಡಿಯಾ ಒಟ್ಟು 7 ಅಂತಾರಾಷ್ಟ್ರೀಯ ವಿಮಾಗಳನ್ನು ರದ್ದುಗೊಳಿಸಿದೆ. ತಾಂತ್ರಿಕ ಸಮಸ್ಯೆ, ವಿಮಾನ ಲಭ್ಯತೆ ಸೇರಿದಂತೆ ವಿವಿಧ ಕಾರಣಗಳಿಂದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. AI915 (ದೆಹಲಿಯಿಂದ ದುಬೈ – B788), AI153 (ದೆಹಲಿಯಿಂದ ವಿಯೆನ್ನಾ – B788), AI143 (ದೆಹಲಿಯಿಂದ ಪ್ಯಾರಿಸ್ – B788), AI159 (ಅಹಮದಾಬಾದ್ ನಿಂದ ಲಂಡನ್ – B788), AI170 (ಲಂಡನ್‌ನಿಂದ ಅಮೃತಸರ – B788), AI133 (ಬೆಂಗಳೂರಿನಿಂದ ಲಂಡನ್ – B788), AI179 (ಮುಂಬೈನಿಂದ ಸ್ಯಾನ್ ಫ್ರಾನ್ಸಿಸ್ಕೋ – B777) ವಿಮಾನಗಳನ್ನು ಮಂಗಳವಾರ ರದ್ದುಗೊಳಿಸಲಾಗಿದೆ.

ಪ್ರತಿ ದಿನ ವಿಮಾಗಳನ್ನು ರದ್ದುಗೊಳಿಸಲಾಗುತ್ತಿದ್ದು, ಪ್ರಯಾಣಿಕರು ಏರ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ರದ್ದು ಮಾಡಬಹುದು ಅಥವಾ ಟಿಕೆಟ್ ಅನ್ನು ಬೇರೆ ದಿನಕ್ಕೆ ವರ್ಗಾಯಿಸಬಹುದು. ಏನೇ ಮಾಡಿದರೂ ಮರುಪಾವತಿ ಮಾಡಲಾಗುತ್ತದೆ. ಬೇರೆ ದಿನಕ್ಕೆ ಟಿಕೆಟ್ ವರ್ಗಾಯಿಸುವವರು ಉಚಿತವಾಗಿ ಪ್ರಯಾಣಿಸಬಹುದು ಎಂದು ಏರ್‌ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X