ಬಾಲ್ ಟ್ಯಾಂಪರಿಂಗ್ ಆರೋಪ; ಆರ್ ಅಶ್ವಿನ್ ವಿರುದ್ಧ ದೂರು

Date:

Advertisements

ಪ್ರಸ್ತುತ ನಡೆಯುತ್ತಿರುವ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿನ (ಟಿಎನ್‌ಪಿಎಲ್) ಪಂದ್ಯದಲ್ಲಿ ಭಾರತ ತಂಡದ ಮಾಜಿ ಸ್ಟಾರ್ ಬೌಲ್ ಆರ್ ಅಶ್ವಿನ್ ಅವರು ಬಾಲ್ ಟ್ಯಾಂಪರಿಂಗ್ (ವಿರೂಪ) ಮಾಡಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಅಶ್ವಿನ್ ವಿರುದ್ಧ ‘ಮಧುರೈ ಪ್ಯಾಂಥರ್ಸ್’ ತಂಡ ಆರೋಪ ಮಾಡಿದೆ.

ಜೂನ್ 14ರಂದು ಅಶ್ಚಿನ್ ಇರುವ ತಂಡ ‘ದಿಂಡಿಗಲ್ ಡ್ರಾಗನ್ಸ್’ ಮತ್ತು ‘ಮಧುರೈ ಪ್ಯಾಂಥರ್ಸ್‌’ ನಡುವೆ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಅಶ್ವಿನ್ ಮತ್ತು ಅವರ ಫ್ರಾಂಚೈಸಿಯವರು ಬಾಲ್‌ಅನ್ನು ವಿರೂಪಗೊಳಿಸಿದ್ದಾರೆ ಎಂದು ಮಧುರೈ ಪ್ಯಾಂಥರ್ಸ್ ಆರೋಪಿಸಿದೆ. ಟಿಎನ್‌ಪಿಎಲ್ ಆಡಳಿತ ಮಂಡಳಿಗೆ ದೂರು ಸಲ್ಲಿಸಿದೆ.

“ಬಾಲ್‌ಅನ್ನು ಭಾರವಾಗಿಸಲು ರಾಸಾಯನಿಕವಾಗಿ ಸಂಸ್ಕರಿಸಿದ ಟವೆಲ್‌ಗಳನ್ನು ಬಳಸಲಾಗಿದೆ. ಹೀಗಾಗಿಯೇ, ಬಾಲ್‌ಅನ್ನು ಹೊಡೆದಾಗ ಲೋಹೀಯ ಶಬ್ದ ಕೇಳಿಬಂದಿದೆ” ಎಂದು ತಂಡವು ಆರೋಪಿಸಿದೆ.

Advertisements

ಆರೋಪಗಳಿಗೆ ಪೂರಕವಾದ ಪುರಾವೆಗಳನ್ನು ಒದಗಿಸುವಂತೆ ಟಿಎನ್‌ಪಿಎಲ್ ಆಡಳಿತವು ತಂಡಕ್ಕೆ ಸೂಚಿಸಿದೆ.

ಈ ಲೇಖನ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ ಶುರುವಾಗಿದ್ದು ಎಲ್ಲಿಂದ? ಇತಿಹಾಸದ ಹಿನ್ನೋಟ!

ದೂರಿನ ಬಗ್ಗೆ ಪ್ರತಿಕ್ರಿಯಿಸಿರುವ ಟಿಎನ್‌ಪಿಎಲ್ ಸಿಇಒ ಪ್ರಸನ್ನ ಕಣ್ಣನ್, “ನಿಯಮದಂತೆ ಪಂದ್ಯ ನಡೆದ 24 ಗಂಟೆಗಳ ಒಳಗೆ ದೂರು ಸಲ್ಲಿಸಬೇಕು. ಆದರೆ, ಅವರು ತಡವಾಗಿ ದೂರು ನೀಡಿದ್ದಾರೆ. ಆದರೂ, ದೂರು ಸ್ವೀಕರಿಸಿದ್ದೇವೆ. ದೂರುದಾರರಿಂದ ಪುರಾವೆ ಕೇಳಲಾಗಿದೆ.ಆರೋಪಗಳಲ್ಲಿ ಯಾವುದೇ ಸತ್ಯ ಕಂಡುಬಂದರೆ, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ TNPLನ 9ನೇ ಆವೃತ್ತಿಯು 2025ರ ಜೂನ್ 5ರಂದು ಆರಂಭವಾಗಿದ್ದು, ಜುಲೈ 6ರವರೆಗೆ ನಡೆಯಲಿದೆ. ಟೂರ್ನಿಯಲ್ಲಿ 8 ತಂಡಗಳಿದ್ದು, ಒಟ್ಟು 32 ಪಂದ್ಯಗಳು ನಡೆಯಲಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X