ಶರಣಾಗುವ ಪ್ರಶ್ನೆಯೇ ಇಲ್ಲ: ಇರಾನ್ ಪರಮೋಚ್ಚ ನಾಯಕ ಗುಡುಗು

Date:

Advertisements

ಶರಣಾಗುವ ಯಾವುದೇ ಪ್ರಶ್ನೆ ಇರಾನ್ ಮುಂದೆ ಇಲ್ಲ ಎಂದು ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಾಮಿನೈ ಹೇಳಿದ್ದಾರೆ.

ಶಾಂತಿಯ ಜೊತೆ ಇರಾನ್ ದೃಢವಾಗಿ ನಿಲ್ಲುವಂತೆ ಯುದ್ಧದ ಜೊತೆಯು ದೃಢವಾಗಿ ನಿಲ್ಲಲಿದೆ. ನಮ್ಮ ರಾಷ್ಟ್ರ ಯಾರಿಗೂ ಶರಣಾಗುವುದಿಲ್ಲ ಎಂದು ಅವರು ದೂರದರ್ಶನದ ಸಂದೇಶದಲ್ಲಿ ಹೇಳಿದ್ದಾರೆ ಎಂದು ʼತಸ್ನಿಮ್ʼ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇರಾನ್ ಮತ್ತು ಅದರ ಇತಿಹಾಸವನ್ನು ತಿಳಿದಿರುವವರು ಇರಾನಿಯನ್ನರು ಬೆದರಿಕೆಯ ಭಾಷೆಗೆ ಸರಿಯಾಗಿ ಎಂದಿಗೂ ಉತ್ತರಿಸುವುದಿಲ್ಲ ಎಂದು ತಿಳಿದಿದ್ದಾರೆ ಎಂದು ಹೇಳುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗೆ ಇರಾನ್ ನಾಯಕ ತಿರುಗೇಟು ನೀಡಿದ್ದಾರೆ.

Advertisements

ಯಾವುದೇ ಮಿಲಿಟರಿ ಹಸ್ತಕ್ಷೇಪವು ನಿಸ್ಸಂದೇಹವಾಗಿ ಸರಿಪಡಿಸಲಾಗದ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ತಿಳಿಯಬೇಕು ಎಂದು ಅವರು ಹೇಳಿದ್ದಾರೆ.

ಇರಾನ್‌ನಲ್ಲಿ 585 ಮಂದಿ ಮೃತ್ಯು

ಬುಧವಾರ ಮುಂಜಾನೆ ಇರಾನ್‌ನ ರಾಜಧಾನಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ತೀವ್ರ ವಾಯುದಾಳಿ ನಡೆಸಿದ್ದು, ಇರಾನ್‌ ನಾದ್ಯಂತ ಕನಿಷ್ಠ 585 ಜನರು ಮೃತಪಟ್ಟಿದ್ದಾರೆ ಮತ್ತು 1,326 ಜನರು ಗಾಯಗೊಂಡಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪು ಹೇಳಿದೆ.

ಇದನ್ನು ಓದಿದ್ದೀರಾ? ಏರ್ ಇಂಡಿಯಾ ಬೋಯಿಂಗ್ 787 ವಿಮಾನಗಳಲ್ಲಿ ಗಂಭೀರ ದೋಷಗಳಿಲ್ಲ: ವಾಯುಯಾನ ಸಂಸ್ಥೆ

ಇಸ್ರೇಲಿ ದಾಳಿಗಳಲ್ಲಿ ಮೃತಪಟ್ಟವರಲ್ಲಿ 239 ಜನರು ನಾಗರಿಕರು ಮತ್ತು 126 ಜನರು ಭದ್ರತಾ ಸಿಬ್ಬಂದಿ ಎನ್ನಲಾಗಿದೆ.

ಮಹ್ಸಾ ಅಮಿನಿಯ ಸಾವಿನ ವಿರುದ್ಧ 2022 ರಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿವರವಾದ ಸಾವುನೋವು ಅಂಕಿಅಂಶಗಳನ್ನೂ ಒದಗಿಸಿದ್ದ ಗುಂಪು, ಇಸ್ಲಾಮಿಕ್ ಗಣರಾಜ್ಯದಲ್ಲಿನ ಸ್ಥಳೀಯ ವರದಿಗಳನ್ನೂ ಪರಿಶೀಲಿಸುತ್ತದೆ.

ಇರಾನ್‌ನ ಮಿಲಿಟರಿ ಮತ್ತು ಪರಮಾಣು ಕಾರ್ಯಕ್ರಮವನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ನಡೆಸಿದ ವಾಯು ಕಾರ್ಯಾಚರಣೆಯ ಆರನೇ ದಿನದಂದು ಟೆಹ್ರಾನ್ ನಿವಾಸಿಗಳು ಗುಂಪು ಗುಂಪಾಗಿ ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ತಿಳಿದು ಬಂದಿದೆ.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುವ ಸಾಧ್ಯತೆಯನ್ನು ತಡೆಯಲು ಇಸ್ರೇಲ್ ತನ್ನ ವಾಯುದಾಳಿ ಕಾರ್ಯಾಚರಣೆಯನ್ನು ಪ್ರಾರಂಭಿಸಬೇಕಾಯಿತು ಎಂದು ಇಸ್ರೇಲ್ ಹೇಳಿಕೊಂಡಿದೆ. ಇರಾನ್ ಮತ್ತು ಅಮೆರಿಕ ಪರಮಾಣು ಕುರಿತು ಹೊಸ ರಾಜತಾಂತ್ರಿಕ ಒಪ್ಪಂದದ ಸಾಧ್ಯತೆಯ ಕುರಿತು ಮಾತುಕತೆ ನಡೆಸುತ್ತಿದ್ದಾಗ ಈ ಬೆಳವಣಿಗೆಗಳು ಸಂಭವಿಸಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾತುಕತೆಗಾಗಿ ನಿಗದಿಪಡಿಸಿದ 60 ದಿನಗಳ ಅವಧಿಯ ನಂತರ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X