Israel-Iran conflict | ಇರಾನ್‌ ನೆಲದಿಂದ 110 ವಿದ್ಯಾರ್ಥಿಗಳು ಭಾರತಕ್ಕೆ ಆಗಮನ

Date:

Advertisements

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಸುರಕ್ಷಿತವಾಗಿ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ.

ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ‘ಆಪರೇಷನ್ ಸಿಂಧು’ ಎಂದು ಹೆಸರಿಟ್ಟಿದ್ದು, ಕಾರ್ಯಾಚರಣೆ ಮೂಲಕ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ.

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಈ ಪೈಕಿ 110 ಮಂದಿ ಇರಾನ್ ಗಡಿ ದಾಟಿ ನೆರೆಯ ಅರ್ಮೇನಿಯಾ ದೇಶಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳನ್ನು ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ನೆರವಿನೊಂದಿಗೆ ಸ್ವದೇಶಕ್ಕೆ ಕರೆಲಾಗಿದೆ.

Advertisements

“ನಮ್ಮಲ್ಲಿ ವಿಮಾನಗಳು ಸಿದ್ಧವಾಗಿವೆ. ಇಂದು (ಗುರುವಾರ) ನಾವು ಮತ್ತೊಂದು ವಿಮಾನವನ್ನು ಕಳುಹಿಸುತ್ತೇವೆ. ನಾವು ತುರ್ಕಮೆನಿಸ್ತಾನದಿಂದ ಇನ್ನೂ ಕೆಲವು ಜನರನ್ನು ಸ್ಥಳಾಂತರಿಸುತ್ತಿದ್ದೇವೆ. ಕಾರ್ಯಾಚರಣೆ 24 ಗಂಟೆ ನಡೆಯುತ್ತಿದೆ. ಇರಾನ್‌ನಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ ಕಾರಣ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಹೆಚ್ಚಿನ ವಿಮಾನಗಳನ್ನು ಕಳುಹಿಸುತ್ತೇವೆ” ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ತಿಳಿಸಿದ್ದಾರೆ.

4 ಸಾವಿರಕ್ಕಿಂತ ಹೆಚ್ಚಿನ ಭಾರತೀಯರು ಇರಾನ್‌ನಲ್ಲಿ ನೆಲೆಸಿದ್ದಾರೆ. ಇವರಲ್ಲಿ ಅರ್ಧಕ್ಕಿಂತ ಹೆಚ್ಚಿನವರು ವಿದ್ಯಾರ್ಥಿಗಳು. ಇರಾನ್‌ನಲ್ಲಿರುವ ಭಾರತೀಯರು, ದೇಶಕ್ಕೆ ಮರಳಲು ತುರ್ತು ಸಹಾಯವಾಣಿ ಮೂಲಕ ಟೆಹರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಪರ್ಕಿಸಬಹುದು. ನವದೆಹಲಿಯಲ್ಲೂ ಸಹಾಯವಾಣಿ ಪ್ರಾರಂಭಿಸಲಾಗಿದೆ.

ಇರಾನ್‌ ನಲ್ಲಿರುವ ಭಾರತೀಯರು ಟೆಹ್ರಾನ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ತುರ್ತು ಸಹಾಯವಾಣಿ +989010144557, +989128109115; +989128109109.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X