ಮಂಡ್ಯ | ಸ್ಲಂಬೋರ್ಡ್ ವಸತಿ ಗೃಹಗಳಿಗೆ ಅತಿಕ್ರಮ ಪ್ರವೇಶ; ಖಾಲಿ ಮಾಡಿಸಿದ ಅಧಿಕಾರಿಗಳು

Date:

Advertisements

ತಮಿಳು ಕಾಲೊನಿ ನಿವಾಸಿಗಳಿಗಾಗಿ ಮಂಡ್ಯ ನಗರದ ಹೊರವಲಯದ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ನಿರ್ಮಿಸಿದ ಸ್ಲಂಬೋರ್ಡ್ ವಸತಿ ಗೃಹಗಳಿಗೆ ಮುಸ್ಲಿಂ ಸಮುದಾಯದ ಕೆಲವು ಜನರು ಅತಿಕ್ರಮವಾಗಿ ಪ್ರವೇಶಿಸಿದ್ದರಿಂದ ಕೆಲಕಾಲ ಗೊಂದಲದ ವಾತಾವರಣದ ಸೃಷ್ಟಿಯಾಗಿತ್ತು.  

ಖಾಲಿ ಮನೆಗಳನ್ನು ಹಿಡಿದುಕೊಂಡರೆ ಆ ಮನೆಗಳು ಅವರಿಗೇ ಸೇರುತ್ತವೆಂಬ ಸುಳ್ಳು ವದಂತಿ ಹಿನ್ನೆಲೆಯಲ್ಲಿ ನಗರದ ನಾನಾ ಬಡಾವಣೆಗಳಲ್ಲಿ ವಾಸಿಸುತ್ತಿದ್ದ ಮುಸ್ಲಿಮರು ಬುಧವಾರ ಲಾರಿಗಳ ಮೂಲಕ ತಂಡೋಪ ತಂಡವಾಗಿ ಬಂದು ತಮಗಿಷ್ಟವಾದ ಮನೆಗಳಿಗೆ ಪ್ರವೇಶ ಮಾಡಿದರು. ಸಾಕಷ್ಟು ಮನೆ ಪಾತ್ರೆ ಸಾಮಾನುಗಳು ಹಾಗೂ ಬಟ್ಟೆ‌ಗಳೊಂದಿಗೆ ಬಂದಿದ್ದರು ಎನ್ನಲಾಗಿದೆ. 

ವಿಷಯ ತಿಳಿದ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿವೈಎಸ್‌ಪಿ ಲಕ್ಷ್ಮೀನಾರಾಯಣ ಪ್ರಸಾದ್, ಕಂದಾಯ ಇಲಾಖೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಮನೆಗಳಿಗೆ ಪ್ರವೇಶ ಮಾಡಿದ ಜನರು ಮತ್ತು ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

Advertisements

ಈ ವೇಳೆ “ತಮಗ್ಯಾರಿಗೂ ಸ್ವಂತ ಮನೆ ಅಥವಾ ನಿವೇಶನಗಳಿಲ್ಲ. ಈ ಮನೆಗಳು ಖಾಲಿ ಇರುವುದರಿಂದ ನಮಗೆ ಕೊಡಿ. ನಾವು ಇಲ್ಲೇ ವಾಸಿಸುತ್ತೇವೆ. ಕಾನೂನು ಬದ್ಧವಾಗಿ ಹಂಚಿಕೆ ಪ್ರಕ್ರಿಯೆ ನಡೆಯುವವರೆಗೆ ಬೇಕಿದ್ದರೆ ಬಾಡಿಗೆ ಪಾವತಿಸಲು ನಾವು ಸಿದ್ಧ” ಎಂದು ಮುಸ್ಲಿಂ ಸಮುದಾಯದ ಜನರು ಒತ್ತಾಯಿಸಿದರು.

“ತಮಿಳು ಕಾಲೊನಿ ನಿವಾಸಿಗಳ ಸ್ಥಳಾಂತರಕ್ಕೆ ನ್ಯಾಯಾಲಯದ ತಡೆಯಾಜ್ಞೆಯಿದೆ. ಹೀಗಾಗಿ ಸ್ಥಳಾಂತರ ಮಾಡಿಲ್ಲ. ಕೆರೆಯಂಗಳದಲ್ಲಿ ನಿರ್ಮಿಸಿರುವ ಈ ಮನೆಗಳು ತಮಿಳು ಕಾಲೊನಿ ನಿವಾಸಿಗಳಿಗಾಗಿ ಮೀಸಲಾಗಿವೆ. ನಿಮಗೆ ಮನೆಗಳಿಲ್ಲವೆಂದರೆ ನೀವು ಅರ್ಜಿಗಳನ್ನು ಕೊಡಿ. ಮುಂದಿನ ಹಂತದಲ್ಲಿ ನಿಮ್ಮ ಅರ್ಜಿಗಳನ್ನು ಪರಿಗಣಿಸುತ್ತೇವೆ” ಎಂದು ಅಧಿಕಾರಿಗಳು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕನ್ನಡ ನಾಡಿನ ಏಕೀಕರಣಕ್ಕೆ ಮುನ್ನುಡಿ ಬರೆದ ಜಿಲ್ಲೆ ಬಳ್ಳಾರಿ: ಯಶವಂತ್‌ರಾಜ್ ನಾಗಿರೆಡ್ಡಿ

ಉಪವಿಭಾಗಾಧಿಕಾರಿ ಶಿವಮೂರ್ತಿ ಮಾತನಾಡಿ, “ಅತಿಕ್ರಮ ಪ್ರವೇಶ ಮಾಡುವುದು ಕಾನೂನುಬಾಹಿರ. ಹೀಗಾಗಿ ನೀವು ತಕ್ಷಣವೇ ಮನೆಗಳನ್ನು ಖಾಲಿ ಮಾಡಬೇಕು. ಸುಳ್ಳು ವದಂತಿಯಿಂದ ನೀವೆಲ್ಲಾ ಬಂದಿದ್ದೀರಿ” ಎಂದು ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ಎಲ್ಲರೂ ಮನೆಗಳನ್ನು ಬಿಟ್ಟು ಹಿಂತಿರುಗಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X