ಚಿತ್ರದುರ್ಗ | ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ವಿಮೆ ಯೋಜನೆಯಡಿ ರೈತರ ನೋಂದಣಿಗೆ ಜುಲೈವರೆಗೆ ಕಾಲಾವಕಾಶ

Date:

Advertisements

ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಟೊಮ್ಯಾಟೋ ಹಾಗೂ ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ.‌

1002184344

ಚಿತ್ರದುರ್ಗ ಜಿಲ್ಲೆಯ ಬೇರೆ ಬೇರೆ ತಾಲೂಕುಗಳಿಗೆ 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅಧಿಸೂಚಿತ ತೋಟಗಾರಿಕೆ ಬೆಳೆಗಳ ತಾಲೂಕುವಾರು ವಿಂಗಡಿಸಿ ವಿಮೆ ನೊಂದಣಿಗೆ ಅವಕಾಶ ನೀಡಲಾಗಿದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ನೀರಾವರಿ ಆಶ್ರಿತ ಈರುಳ್ಳಿ ಬೆಳೆ ವಿಮೆ ನೊಂದಣಿಗೆ ಜುಲೈ 15 ಕಡೆಯ ದಿನ. ಚಿತ್ರದುರ್ಗ ಜಿಲ್ಲೆಗೆ ವಿಮಾ ಕಂಪನಿಯಾಗಿ ದಿ ಓರಿಎಂಟಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಅನ್ನು ನಿಗಧಿಪಡಿಸಲಾಗಿದೆ.

1002184345

ಚಿತ್ರದುರ್ಗ ತಾಲೂಕಿನ ಕಸಬಾ, ತುರುವನೂರು ಹಾಗೂ ಹಿರೇಗುಂಟನೂರು ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ), ಭರಮಸಾಗರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ). ಹಿರಿಯೂರು ತಾಲೂಕಿನ ಕಸಬಾ ಹೋಬಳಿ (ಈರುಳ್ಳಿ ನೀರಾವರಿ) ಧರ್ಮಪುರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೋ) ಐಮಂಗಲ, ಜೆ.ಜಿ.ಹಳ್ಳಿ ಹೋಬಳಿಗೆ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ). ಹೊಳಲ್ಕೆರೆ ತಾಲೂಕಿನ ರಾಮಗಿರಿ ಹಾಗೂ ತಾಳ್ಯ ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ, ಟೊಮೋಟೊ), ಹೊಸದುರ್ಗ ತಾಲೂಕಿನ ಕಸಬಾ ಹೋಬಳಿ (ಈರುಳ್ಳಿ ಮಳೆಯಾಶ್ರಿತ, ಟೊಮೊಟೊ, ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ). ಚಳ್ಳಕೆರೆ ತಾಲೂಕಿನ ಕಸಬಾ, ನಾಯಕನಹಟ್ಟಿ, ಪರುಶುರಾಂಪುರ ಹಾಗೂ ತಳಕು ಹೋಬಳಿಗೆ (ಈರುಳ್ಳಿ ನೀರಾವರಿ, ಟೊಮೋಟೊ).‌ಮೊಳಕಾಲ್ಮುರು ತಾಲೂಕಿನ ದೇವಸಮುದ್ರ ಹಾಗೂ ಕಸಬಾ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ) ಬೆಳೆಗಳ ನೋಂದಣಿಗೆ ಅವಕಾಶವಿದೆ.

Advertisements
1002184343

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನ್ಯಾಯವಾದಿಗಳು ಸಂವಿಧಾನದ ರಾಯಭಾರಿಗಳು ಮೂಲಭೂತ ಹಕ್ಕುಗಳ ರಕ್ಷಕರು; ನ್ಯಾ. ಶಿವರಾಜ ವಿ. ಪಾಟೀಲ

ಟೊಮ್ಯಾಟೋ ಬೆಳೆಯ ವಿಮೆ ಮೊತ್ತ ಹೆಕ್ಟೇರಿಗೆ ರೂ.141500 ಇದ್ದು, ರೈತರ ವಿಮಾ ಕಂತು ರೂ.7075 ಆಗಿದೆ. ನೀರಾವರಿ ಈರುಳ್ಳಿ ವಿಮೆ ಮೊತ್ತ ಹೆಕ್ಟೇರಿಗೆ ರೂ.80500 ಇದ್ದು, ರೈತರ ವಿಮಾ ಕಂತು ರೂ.4025 ಆಗಿದೆ. ಮಳೆ ಆಶ್ರಿತ ಈರುಳ್ಳಿ ವಿಮಾ ಮೊತ್ತ ಹೆಕ್ಟೇರಿಗೆ ರೂ. 75750 ಆಗಿದ್ದು, ರೈತರ ವಿಮಾ ಕಂತು ರೂ.3787.50 ಆಗಿದೆ. ಮಳೆ ಆಶ್ರಿತ ಕೆಂಪು ಮೆಣಸಿಕಾಯಿ ವಿಮಾ ಮೊತ್ತ ಹೆಕ್ಟೇರಿಗೆ ರೂ.78750 ಆಗಿದ್ದು, ರೈತರ ವಿಮಾ ಕಂತು 3937.50 ಆಗಿದೆ. ಅಧಿಸೂಚಿತ ಬೆಳೆಗಳ ವಿಮೆಯನ್ನು ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ ಹಾಗೂ ಇತರ ಅಧಿಕೃತ ಕೇಂದ್ರಗಳಲ್ಲಿ ನೊಂದಣಿ ಮಾಡಬಹುದು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | 261 ದೇಸಿ ಸಾಂಪ್ರದಾಯಿಕ ಬೆಳೆ, ತಳಿಗಳ ಸಂರಕ್ಷಣೆ

ನಮ್ಮ ಪೂರ್ವಜರ ದೀರ್ಘಾಯುಷ್ಯ ಮತ್ತು ಆರೋಗ್ಯಯುತ ಜೀವನ ಶೈಲಿಗೆ ಪ್ರಮುಖ ಕಾರಣವಾಗಿದ್ದು...

ಚಿತ್ರದುರ್ಗ | ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಸಬಲೀಕರಣ; ಸಚಿವ ಡಿ.ಸುಧಾಕರ್ ಅಭಿಮತ

"ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ...

ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ...

Download Eedina App Android / iOS

X