ಗುಜರಾತ್‌ನಲ್ಲಿ ಭಾರಿ ಮಳೆ | ತುಂಬಿದ ಒಂಬತ್ತು ಅಣೆಕಟ್ಟುಗಳು: 1,000ಕ್ಕೂ ಹೆಚ್ಚು ಜನರ ಸ್ಥಳಾಂತರ

Date:

Advertisements

ಗುಜರಾತ್‌ನಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಒಂಬತ್ತು ಅಣೆಕಟ್ಟುಗಳು ತುಂಬಿದೆ. 27 ಜಿಲ್ಲೆಗಳ 160 ತಾಲೂಕುಗಳಲ್ಲಿ ಸರಾಸರಿ 21.24 ಮಿಮೀ ಮಳೆಯಾಗಿದೆ. ಆದರೆ 91 ತಾಲೂಕುಗಳು ಸಂಪೂರ್ಣವಾಗಿ ಬತ್ತಿಹೋಗಿವೆ. ಅಣೆಕಟ್ಟುಗಳಲ್ಲಿ ಅಪಾಯಕಾರಿಯಾಗಿ ನೀರಿನ ಮಟ್ಟ ಏರುತ್ತಿರುವ ಕಾರಣ 15 ಅಣೆಕಟ್ಟುಗಳ ಸಮೀಪ ಹೈ ಅಲರ್ಟ್‌ ಘೋಷಿಸಲಾಗಿದೆ. ಈಗಾಗಲೇ 22ಕ್ಕೂ ಅಧಿಕ ಮಂದಿ ಭಾರಿ ಮಳೆಗೆ ಬಲಿಯಾಗಿದ್ದಾರೆ.

ಮುನ್ನೆಚ್ಚರಿಕೆಯಾಗಿ, 1,060 ಜನರನ್ನು ಸ್ಥಳಾಂತರಿಸಲಾಗಿದೆ. ಭಾವನಗರದಲ್ಲಿ 729, ಸುರೇಂದ್ರನಗರದಲ್ಲಿ 134, ಬೋಟಾಡ್‌ನಲ್ಲಿ 117 ಮತ್ತು ಅಮ್ರೇಲಿಯಲ್ಲಿ 80 ಜನರನ್ನು ಸ್ಥಳಾಂತರಿಸಲಾಗಿದೆ. ಬೋಟಾಡ್‌ನಲ್ಲಿ 24, ಭಾವನಗರದಲ್ಲಿ 89 ಮತ್ತು ಅಮ್ರೇಲಿಯಲ್ಲಿ 69- ಹೀಗೆ ವಿಪತ್ತು ನಿರ್ವಹಣಾ ತಂಡಗಳು 182 ಜನರನ್ನು ರಕ್ಷಿಸಿವೆ. ಎನ್‌ಡಿಆರ್‌ಎಫ್‌ನ 13 ಮತ್ತು ಎಸ್‌ಡಿಆರ್‌ಎಫ್‌ನ 20 ಸೇರಿದಂತೆ 33 ತಂಡಗಳನ್ನು ನಿಯೋಜಿಸಿದೆ.

ಇದನ್ನು ಓದಿದ್ದೀರಾ? ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Advertisements

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ತೀವ್ರ ಮುಂಗಾರು ಮಳೆಯಾಗಿದ್ದು ಪ್ರವಾಹದ ಎಚ್ಚರಿಕೆ ನೀಡಲಾಗಿದೆ. 206 ಅಣೆಕಟ್ಟುಗಳಲ್ಲಿ, ಒಂಬತ್ತು ಅಣೆಕಟ್ಟುಗಳು ತುಂಬಿವೆ. 15 ಅಣೆಕಟ್ಟುಗಳು ಹೈ ಅಲರ್ಟ್‌ನಲ್ಲಿದೆ. ಸರ್ದಾರ್ ಸರೋವರ್ ಅಣೆಕಟ್ಟು ನಿರಂತರವಾಗಿ ತುಂಬುತ್ತಿದೆ. ಗಂಟೆಗೆ 16,914 ಕ್ಯೂಸೆಕ್ ನೀರಿನ ಒಳಹರಿವು ಇದ್ದು, ನರ್ಮದಾ ಕಾಲುವೆಗೆ 23,844 ಕ್ಯೂಸೆಕ್‌ಗಳನ್ನು ಬಿಡಲಾಗುತ್ತಿದೆ. ಪ್ರಸ್ತುತ ನೀರಿನ ಮಟ್ಟವು 392.22 ಅಡಿಗಳಷ್ಟಿದೆ.

ಜೊತೆಗೆ ವಿದ್ಯುತ್ ಸಮಸ್ಯೆಯೂ ಎದುರಾಗಿದೆ. 13,285 ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದು, ಈ ಪೈಕಿ 13,209 ಗ್ರಾಮಗಳಲ್ಲಿ ಸಮಸ್ಯೆ ಪರಿಹರಿಸಲಾಗಿದೆ. 17,005 ಹಾನಿಗೊಳಗಾದ ವಿದ್ಯುತ್ ಕಂಬಗಳಲ್ಲಿ 16,031 ದುರಸ್ತಿ ಮಾಡಲಾಗಿದೆ. ಆದರೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲದಂತಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X